ಕಾಸರಗೋಡು : ಮಂಗಳೂರಿನಿಂದ ಕಾಸರಗೋಡಿಗೆ ಬರುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ಸಿನಲ್ಲಿ ದಾಖಲೆಗಳಿಲ್ಲದೆ ಸಾಗಾಟ ಮಾಡುತ್ತಿದ್ದ ೩೬. ೪೭ ಲಕ್ಷ ರೂ. ವನ್ನು ಇಂದು ಮುಂಜಾನೆ ಅಬಕಾರಿ ದಳದ ಸಿಬ್ಬಂದಿಗಳು ವಶಪಡಿಸಿಕೊಂಡಿದ್ದು , ಮಹಾರಾಷ್ಟ್ರ ಸಾಂಗ್ಲಿಯ ಗೋಪಾಲ್ ಎಂಬಾತನನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.
ಮಂಜೇಶ್ವರ ಚೆಕ್ ಪೋಸ್ಟ್ ನ ಲ್ಲಿ ವಾಹನ ತಪಾಸಣೆ ಸಂದರ್ಭದಲ್ಲಿ ಹಣ ಪತ್ತೆಯಾಗಿದೆ. ಕಾಸರಗೋಡಿನ ಜುವೆಲ್ಲರಿ ಯೊಂದಕ್ಕೆ ಒಪ್ಪಿಸಲು ಈ ಹಣ ತಂದಿದ್ದಾಗಿ ಈತ ವಿಚಾರಣೆ ಸಂದರ್ಭದಲ್ಲಿ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ.
ಆದರೆ ಈತ ನಿರಂತರ ಹವಾಲ ಹಣ ಸಾಗಾಟ ಮಾಡುತ್ತಿದ್ದುದಾಗಿ ಅಬಕಾರಿ ಅಧಿಕಾರಿಗಳು ತಿಳಿಸಿದ್ದಾರೆ.