ಕಾಸರಗೋಡು: ಮುಳಿಯಾರಿನಲ್ಲಿ ಆರಂಭಗೊಂಡಿರುವ ಎಂಡೋಸಲ್ಫಾನ್ ಪುನರ್ವಸತಿ ಗ್ರಾಮದ ಮೊದಲ ಹಂತದ ಕಾಮಗಾರಿ ಜೂನ್ ವೇಳೆಗೆ ಪೂರ್ಣಗೊಳ್ಳಲಿದೆ ಎಂದು, ಯೋಜನಾ ಪ್ರದೇಶಕ್ಕೆ ಭೇಟಿ ನೀಡಿ ಕಾಮಗಾರಿ ಪ್ರಗತಿ ಪರಿಶೀಲನೆ ನಡೆಸಿದ ಬಳಿಕ ಸಾಮಾಜಿಕ ನ್ಯಾಯ ಮತ್ತು ಉನ್ನತ ಶಿಕ್ಷಣ ಸಚಿವೆ ಡಾ.ಆರ್.ಬಿಂದು ಹೇಳಿದರು.
ಎಲ್ಲಾ ರೀತಿಯ ಥೆರಪಿ ಚಿಕಿತ್ಸಾ ಸೌಲಭ್ಯಗಳನ್ನು ಕೇಂದ್ರದಲ್ಲಿ ಕಲ್ಪಿಸಲಾಗಿದೆ. ಎಂಡೋಸಲ್ಫಾನ್ ಸಂತ್ರಸ್ತರಿಗೆ ಬೆಂಬಲ ಸೌಲಭ್ಯಗಳನ್ನು ಒದಗಿಸುವ ಪುನರ್ವಸತಿ ಗ್ರಾಮ ಇಲ್ಲಿ ಬರಲಿದೆ. ಸವಿವರ ಗಳನ್ನೊಳಗೊಂಡ ಯೋಜನೆ ಸಿದ್ಧಪಡಿಸಿ ಅಗತ್ಯವಿರುವ ನಿಧಿ ಸಂಗ್ರಹಿಸಿ ಮುಂದಿನ ಕ್ರಮಗಳನ್ನು ಕೈಗೊಳ್ಳುವುದಾಗಿ ಸಚಿವೆ ಡಾ.ಆರ್.ಬಿಂದು ತಿಳಿಸಿದರು.
ಪ್ರಸ್ತುತ ನಿರ್ಮಾಣ ಹಂತದಲ್ಲಿರುವ ಕಟ್ಟಡದ ನಕ್ಷೆಯನ್ನು ಪರಿಶೀಲಿಸಿದ ಸಚಿವರು, ಪುನರ್ವಸತಿ ಗ್ರಾಮ ಯೋಜನೆಯಲ್ಲಿ ಆಗುತ್ತಿರುವ ನಿರ್ಮಾಣಗಳ ಬಗೆಗಿನ ಮಾಹಿತಿಯನ್ನು ಕೇಳಿ ತಿಳಿದರು. ಸಕಾಲದಲ್ಲಿ ಕಾಮಗಾರಿ ಪೂರ್ಣಗೊಳಿಸುವಂತೆ ತಿಳಿಸಿ ಸಚಿವರು ವಾಪಸಾದರು. ಶಾಸಕ ಸಿ.ಎಚ್.ಕುಂಞಂಬು, ಜಿಲ್ಲಾ ಸಾಮಾಜಿಕ ನ್ಯಾಯ ಅಧಿಕಾರಿ ಶೀಬಾ ಮುಮ್ತಾಜ್, ಕೆ.ಪಿ.ಬೀನಾ, ಎಂ.ಅಬ್ದುಲ್ಲಾ, ಎ.ಮುಹಮ್ಮದ್ ನೌಫಲ್, ಕಂದಾಯ ಅಧಿಕಾರಿಗಳು, ಗುತ್ತಿಗೆದಾರ ಪ್ರತಿನಿಧಿಗಳು ಉಪಸ್ಥಿತರಿದ್ದರು