News Karnataka Kannada
Sunday, April 28 2024
ಕಾಸರಗೋಡು

ಕಾಸರಗೋಡು: ಹೊಳೆಯಲ್ಲಿ ಮುಳುಗಿ ಇಬ್ಬರು ಯುವಕರ ಸಾವು

Two youths drown in river in Kasargod
Photo Credit : By Author

ಕಾಸರಗೋಡು: ಹೊಳೆಯಲ್ಲಿ ಮುಳುಗಿ ಇಬ್ಬರು ಯುವಕರು ಮೃತಪಟ್ಟ ಘಟನೆ ಬುಧವಾರ ಸಂಜೆ ಪಯಸ್ವಿನಿ ಬೇಡಡ್ಕ ಕರಿಚ್ಚೇರಿ ಹೊಳೆಯಲ್ಲಿ ನಡೆದಿದೆ.ನೀರುಪಾಲಾಗಿದ್ದ ಇಬ್ಬರ ಮೃತದೇಹ ರಾತ್ರಿ ಪತ್ತೆಯಾಗಿದೆ.

ಕೊಲ್ಲಂವಿಜಿತ್ ( ೨೩) ಮತ್ತು ತಿರುವನಂತಪುರದ ಆರ್.ರಂಜು(೨೪) ಮೃತಪಟ್ಟವರು.

ಬುಧವಾರ ಸಂಜೆ ನಾಲ್ಕು ಗಂಟೆ ಸುಮಾರಿಗೆ ಬೇಡಡ್ಕ ಮುನಂಬ್ ತೂಗು ಸೇತುವೆ ಬಳಿ ಹೊಳೆಗೆ ಸ್ನಾನ ಕ್ಕೆಂದು ಸ್ನೇಹಿತರ ಜೊತೆ ಇಳಿದಿದ್ದು,ಈ ಸಂದರ್ಭದಲ್ಲಿ ಇಬ್ಬರುಮುಳುಗಿದ್ದರು ಬಳಿಕ ಅಗ್ನಿಶಾಮಕ ದಳದ ಸಿಬಂದಿಗಳು, ಪೊಲೀಸರು ಹಾಗೂ ಪರಿಸರವಾಸಿಗಳು ಶೋಧ ನಡೆಸಿದ್ದು,ರಾತ್ರಿ ೧೧ ಗಂಟೆ ಸುಮಾರಿಗೆ ಇಬ್ಬರ ಮೃತದೇಹ ಪತ್ತೆಯಾಗಿದೆ.

ವಿಜಿತ್ ನ ಮೃತ ದೇಹ ತೂಗು ಸೇತುವೆ ಬಳಿ ಹಾಗೂ ರಂಜುವಿನ ಮೃತದೇಹ ಘಟನೆ ನಡೆದ ಅಲ್ಪ ದೂರ ಪತ್ತೆಯಾಗಿದೆ.ಬೇಡಡ್ಕ ಠಾಣಾ ಪೊಲೀಸರು ಮಹಜರು ನಡೆಸಿದ್ದು,ಮರಣೋತ್ತರ ಪರೀಕ್ಷೆ ಬಳಿಕ ಇಬ್ಬರ ಮೃತದೇಹವನ್ನು ಸಂಬಂಧಿಕರಿಗೆ ಬಿಟ್ಟು ಕೊಡಲಿದೆ.

ಚೆನ್ನೈನ ಖಾಸಗಿ ಕಂಪೆನಿಯಲ್ಲಿ ದುಡಿಯುತ್ತಿದ್ದ ಇಬ್ಬರೂ ಇದೇ ಕಂಪೆನಿಯಲ್ಲಿ ಕೆಲಸ ನಿರ್ವಹಿಸುತ್ತಿರುವ ಮುನಂಬ್ ನ ಸಹದ್ಯೋಗಿ ವಿಷ್ಣುರವರ ಮನೆಗೆ ಬಂದಿದ್ದರು.

ಸೆ.೨೫ ರಂದು ಸ್ನೇಹಿತರ ಜೊತೆ ಗೋವಾಕ್ಕೆ ತೆರಳಿ ಬುಧವಾರ ರಾಣಿಪುರಕ್ಕೆ ಆಗಮಿಸಿದ್ದು, ಸಂಜೆ ಮೂರು ಗಂಟೆಗೆ ಮುನಂಬ್ ನಲ್ಲಿರುವ ವಿಷ್ಣು ವಿನ ಮನೆಗೆ ಬಂದಿದ್ದರು. ರಾತ್ರಿ ಇವರು ರೈಲಿನಲ್ಲಿ ಊರಿಗೆ ಮರಳುವವರಿದ್ದರು.ಸಂಜೆ ನಾಲ್ಕು ಗಂಟೆಗೆ ಇವರು ಮುನಂಬ್ ನಲ್ಲಿರುವ ತೂಗು ಸೇತುವೆ ಬಳಿಗೆ ತಲಪಿದ್ದರು. ಬಳಿಕ ವಿಜಿತ್, ರಂಜು ಸೇರಿದಂತೆ ನಾಲ್ವರು ಹೊಳೆಗೆ ಇಳಿದಿದ್ದರು. ಈ ಸಂದರ್ಭದಲ್ಲಿ ಇಬ್ಬರು ನೀರುಪಾಲಾಗಿದ್ದರು. ದುರಂತದ ಸುದ್ದಿ ತಿಳಿದು ಸಂಬಂಧಿಕರು ಕಾಸರಗೋಡಿಗೆ ಆಗಮಿಸಿದ್ದು, ಮಧ್ಯಾಹ್ನದ ವೇಳೆಗೆ ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನು ಸಂಬಂಧಿಕರಿಗೆ ಬಿಟ್ಟುಕೊಡಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
176
Stephen K

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು