News Karnataka Kannada
Tuesday, April 30 2024
ಕಾಸರಗೋಡು

ಕಾಸರಗೋಡು: ವಿದ್ಯಾನಗರ ತ್ವರಿತ ವಿಶೇಷ ನ್ಯಾಯಾಲಯ ಉದ್ಘಾಟನೆ

Kasar
Photo Credit : By Author

ಕಾಸರಗೋಡು: ಪೋಕ್ಸೊ ನ್ಯಾಯಾಲಯಗಳು ಮಕ್ಕಳ ಬಗ್ಗೆ ಸಂಪೂರ್ಣ ಸಹಾನುಭೂತಿ ಹೊಂದಿರಬೇಕು ಎಂದು ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ದೇವನ್ ರಾಮಚಂದ್ರನ್ ಅಭಿಪ್ರಾಯಪಟ್ಟಿದ್ದಾರೆ.

ಶನಿವಾರ ವಿದ್ಯಾನಗರದಲ್ಲಿ ವಿಶೇಷ ತ್ವರಿತ ನ್ಯಾಯಾಲಯವನ್ನು ಉದ್ಘಾಟಿಸಿ ಅವರು ಮಾತನಾಡಿದರು. ದೌರ್ಜನ್ಯಕ್ಕೊಳಗಾದ ಮಕ್ಕಳಿಗೆ ನ್ಯಾಯವನ್ನು ಸಹಾನುಭೂತಿ ಮತ್ತು ಸ್ವಾಗತಾರ್ಹ ವ್ಯವಸ್ಥೆಯ ಮೂಲಕ ಮಾತ್ರ ಸಾಧಿಸಬಹುದು. ನ್ಯಾಯಾಲಯವು ಉದ್ಘಾಟನೆಗೊಂಡಾಗ, ನ್ಯಾಯವನ್ನು ಪಡೆಯುವ ಮೂಲಭೂತ ಹಕ್ಕು ಮತ್ತಷ್ಟು ಬಲಗೊಳ್ಳುತ್ತದೆ. ಇತರ ನ್ಯಾಯಾಲಯಗಳಿಗಿಂತ ಭಿನ್ನವಾಗಿಪೋಕ್ಸೋ ನ್ಯಾಯಾಲಯಗಳು ಮೊಕದ್ದಮೆಗಳನ್ನು ಶೀಘ್ರವಾಗಿ ತೀರ್ಮಾನಿಸಲಾಗುತ್ತದೆ. ಮಕ್ಕಳು ತಮ್ಮ ಪೋಷಕರಿಂದ ಪಡೆಯುವ ಅದೇ ಕಾಳಜಿಯನ್ನು ಪೋಕ್ಸೊ ನ್ಯಾಯಾಲಯಗಳಿಂದ ಪಡೆಯಬೇಕು. ಮಕ್ಕಳ ಮೇಲಿನ ಯಾವುದೇ ದೌರ್ಜನ್ಯ ದೇಶದ ವಿರುದ್ಧದ ಹಿಂಸೆ. ಮಕ್ಕಳು ಹಿಂಸೆಗೆ ಬಲಿಯಾದಾಗ ಪ್ರಜಾಪ್ರಭುತ್ವದ ಬುನಾದಿ ಅಲುಗಾಡುತ್ತದೆ ಎಂದು ನ್ಯಾಯಮೂರ್ತಿ ದೇವನ್ ರಾಮಚಂದ್ರನ್ ಹೇಳಿದರು.

ಜಿಲ್ಲಾ ಮತ್ತು ಪ್ರಧಾನ ಸತ್ರ ನ್ಯಾಯಾಧೀಶ ಸಿ.ಕೃಷ್ಣಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಶಾಸಕರಾದ ಸಿ.ಎಚ್. ಕುಞ೦ಬು, ಎ.ಕೆ.ಎಂ.ಅಶ್ರಫ್, ವಕೀಲರ ಸಂಘದ ಅಧ್ಯಕ್ಷ ನ್ಯಾಯವಾದಿ ಎನ್.ರಾಜಮೋಹನ್, ಮಧೂರು ಗ್ರಾಮ ಪಂಚಾಯತ್ ಅಧ್ಯಕ್ಷ ಕೆ.ಗೋಪಾಲಕೃಷ್ಣ, ಜಿಲ್ಲಾ ಸರಕಾರಿ ಪ್ಲೀಡರ್ ಅಡ್ವ.ಕೆ.ದಿನೇಶ್ ಕುಮಾರ್, ಕಾಸರಗೋಡು ವಕೀಲ ಗುಮಾಸ್ತರ ಸಂಘದ ಅಧ್ಯಕ್ಷ ನಾರಾಯಣ ಮಣಿ ಮಾತನಾಡಿದರು. ಕಾಸರಗೋಡು ವಕೀಲರ ಸಂಘದ ಅಧ್ಯಕ್ಷ ನ್ಯಾಯವಾದಿ .ಎಂ.ನಾರಾಯಣ ಭಟ್ ಸ್ವಾಗತಿಸಿ, ಕಾಸರಗೋಡು ಮುಖ್ಯ ನ್ಯಾಯಿಕ ದಂಡಾಧಿಕಾರಿ ಕೆ.ಜಿ.ಉಣ್ಣಿಕೃಷ್ಣನ್ ವಂದಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
176
Stephen K

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು