ಕಾಸರಗೋಡು

ಕಾಸರಗೋಡು: ಮಾದಕ ವಸ್ತು ನೀಡಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ

ಕಾಸರಗೋಡು: 19 ರ ಹರೆಯದ ಯುವತಿಗೆ ಮಾದಕ ವಸ್ತು ನೀಡಿ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆಯೊಂದು ವಿದ್ಯಾನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಮೂವರನ್ನು ಕಾಸರಗೋಡು ಪೊಲೀಸರು ಬಂಧಿಸಿದ್ದಾರೆ.

ಮಧೂರು ಪಟ್ಲದ ಜೆ. ಶೈನಿತ್ ಕುಮಾರ್ (30), ಉಪ್ಪಳ ಮಂಗಲ್ಪಾಡಿ ಯ ಮೋಕ್ಷಿತ್ ಶೆಟ್ಟಿ (43) ಮತ್ತು ಉಳಿಯತ್ತಡ್ಕದ ಎನ್.ಪ್ರಶಾಂತ್ (27) ಬಂಧಿತರು. ಕಾಸರಗೋಡು ಮಹಿಳಾ ಠಾಣಾ ಇನ್ಸ್ ಪೆಕ್ಟರ್ ಪಿ . ಚಂದ್ರಿಕಾ ನೇತೃತ್ವ ದ ತಂಡವು ಇವರನ್ನು ಬಂಧಿಸಿದೆ. ಮಧ್ಯವರ್ತಿಯಾಗಿದ್ದ ಕಾಞ೦ಗಾಡಿನ ಮಹಿಳೆಯೋರ್ವಳನ್ನು ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ.

ಆರ್ಥಿಕ ವಾಗಿ ಹಿಂದುಳಿದ ಕುಟುಂಬದ ಯುವತಿಗೆ ಆಮಿಷ ತೋರಿಸಿ ತಂಡವು ಈ ಕೃತ್ಯ ನಡೆಸಿದ್ದು, ಪಾನೀಯ ದಲ್ಲಿ ಮಾದಕ ವಸ್ತು ಬೆರೆಸಿ ನೀಡಿ ಅತ್ಯಾಚಾರ ನಡೆಸಲಾಗಿದೆ.

ನೆರೆಮನೆಯ ಯುವಕನೋರ್ವ ಈತನನ್ನು ಪ್ರೀತಿಸುವ ನಾಟಕವಾಡಿ ಬಳಿಕ ವಿವಾಹವಾಗುವ ಭರವಸೆ ನೀಡಿ ವಿವಿಧೆಡೆಗೆ ಕರೆದೊಯ್ದಿದ್ದು , ಯುವತಿಯ ಮೇಲೆ ಅತ್ಯಾಚಾರ ನಡೆಸಿದ್ದಾನೆ. ಇದಲ್ಲದೆ ಮಧ್ಯವರ್ತಿಯಾದ ಮಹಿಳೆ ಮೂಲಕ ಇತರರಿಗೂ ಯುವತಿಯನ್ನು ಒಪ್ಪಿಸಿದ್ದು ಸಾಮೂಹಿಕ ಅತ್ಯಾಚಾರ ನಡೆಸಿರುವುದಾಗಿ ತನಿಖೆಯಿಂದ ತಿಳಿದುಬಂದಿದೆ .

ಕಾಸರಗೋಡು , ಮಂಗಳೂರು , ಚೆರ್ಕಳ , ತೃಶ್ಯೂರು ಮೊದಲಾದೆಡೆಗಳಲ್ಲಿನ ವಸತಿಗ್ರಹಗಳಲ್ಲಿ ತಂಗಿ ಅತ್ಯಾಚಾರ ನಡೆಸಲಾಗಿದೆ. ನಿರಂತರವಾಗಿ ಅತ್ಯಾಚಾರಕ್ಕೊಳಗಾದ ಹಿನ್ನಲೆಯಲ್ಲಿ ಮಾನಸಿಕ – ಅರೋಗ್ಯ ಸಮಸ್ಯೆ ತಲೆದೋರಿದ್ದು , ಆಸ್ಪತ್ರೆಗೆ ದಾಖಲಾದ ಸಂದರ್ಭದಲ್ಲಿ ನಡೆಸಿದ ಕೌನ್ಸಿಲಿಂಗ್ ನಡೆಸಿದ್ದು , ಈ ಸಂದರ್ಭದಲ್ಲಿ ಬೆಚ್ಚಿ ಬೀಳಿಸುವ ಮಾಹಿತಿಗಳು ಹೊರಬಿದ್ದಿವೆ.

ಬಳಿಕ ಪೊಲೀಸರು ಯುವತಿಯಿಂದ ಮಾಹಿತಿ ಪಡೆದು ತನಿಖೆ ನಡೆಸಿದ್ದರು. ಕೃತ್ಯದಲ್ಲಿ ಇನ್ನಷ್ಟು ಮಂದಿ ಶಾಮೀಲಾಗಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಲಭಿಸಿದೆ. ಮಧ್ಯವರ್ತಿಯಾಗಿದ್ದ ಮಹಿಳೆಯ ವಿಚಾರಣೆ ನಡೆಸುತ್ತಿದ್ದಾರೆ.

Gayathri SG

Recent Posts

ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ: ಆರೋಪಿ ಬಿಭವ್‌ ಕುಮಾರ್‌ ವಶಕ್ಕೆ

ಆಮ್‌ ಆದ್ಮಿ ಪಕ್ಷದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ನಡೆಸಿದ ಆರೋಪಿ, ಅರವಿಂದ್‌ ಕೇಜ್ರಿವಾಲ್‌ ಆಪ್ತ ಕಾರ್ಯದರ್ಶಿ…

7 mins ago

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಹುಸಿ ಬಾಂಬ್ ಬೆದರಿಕೆ: ಪ್ರಯಾಣಿಕನ ಮೇಲೆ ಪ್ರಕರಣ ದಾಖಲು

ಬೆಂಗಳೂರಿನಿಂದ ಪುಣೆಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದ ಚೆಕ್-ಇನ್ ಬ್ಯಾಗ್‌ನಲ್ಲಿ ಬಾಂಬ್ ಅಡಗಿಸಿಟ್ಟಿರುವುದಾಗಿ ಸುಳ್ಳು ಬೆದರಿಕೆ ಹಾಕಿ ಭೀತಿ…

16 mins ago

ಸಂವಿಧಾನವನ್ನು ಯಾವುದೇ ಸರ್ಕಾರ ಬದಲಾಯಿಸಲು ಸಾಧ್ಯವಿಲ್ಲ : ನಿತಿನ್‌ ಗಡ್ಕರಿ

ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನ ಬದಲಿಸಲಿದೆ ಎನ್ನುವ ಕಾಂಗ್ರೆಸ್‌ ಆರೋಪಕ್ಕೆ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿಗಳ ಖಾತೆ ಸಚಿವ…

28 mins ago

ತೀರ್ಥಯಾತ್ರೆಗೆ ಬಂದ ನಾಲ್ವರು ನದಿಯಲ್ಲಿ ಮುಳುಗಿ ದಾರುಣ ಸಾವು

ತೀರ್ಥಯಾತ್ರೆಗೆಂದು ಅತಿಥಿ ಗೃಹಕ್ಕೆ ಬಂದಿದ್ದವರು ನದಿಯಲ್ಲಿ ಬಟ್ಟೆ ತೊಳೆಯಲು ಹೋಗಿ ನಾಲ್ವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಕೊಲ್ಲಾಪುರದ ಕಾಗಲ್ ತಾಲೂಕಿನ…

46 mins ago

ಪ್ರಾಚೀನರ ಕಲಾ ಕೊಡುಗೆಗಳ ಸಂರಕ್ಷಣೆ ಅಗತ್ಯ: ನೇಮಿರಾಜ ಶೆಟ್ಟಿ

ಇತಿಹಾಸವನ್ನು ಚಿತ್ರಗಳ ಮೂಲಕ ಜೋಪಾಸನೆ ಮಾಡುವ ಕಾಯಕವೂ ಅತ್ಯಂತ ಶ್ರೇಷ್ಠ. ಮುಂದಿನ ಪೀಳಿಗೆಗೆ ಪ್ರಾಚೀನರ ಕಲಾ ಕೊಡುಗೆಯನ್ನು ಸಂರಕ್ಷಣೆ ಮಾಡುವುದು…

52 mins ago

ಮತ್ತೆ ವಿವಾದಕ್ಕೆ ಸಿಲುಕಿದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ

ಒಂದು ವರ್ಷದ ಸಾಧನೆಯ ರಿಪೋರ್ಟ್ ಕಾರ್ಡ್ ಹಿಡಿದು ಹಿರಿಯ ಬಿಜೆಪಿ ಮುಖಂಡರ ಬಳಿ ಶಾಸಕ ಅಶೋಕ್ ಕುಮಾರ್ ರೈ ತೆರಳಿದ್ದು, ಶಾಸಕ…

1 hour ago