ಕಾಸರಗೋಡು : ಮನೆಯ ಟೆರೇಸ್ ನಲ್ಲಿ ಗಾಂಜಾ ಗಿಡಗಳನ್ನು ಬೆಳೆಸಿದ್ದ ಯುವಕನನ್ನು ಕುಂಬಳೆ ಪೊಲೀಸರು ಬಂಧಿಸಿದ್ದಾರೆ. ಬೇಕೂರು ಕನ್ನಡಿ ಪಾರೆಯ ನಜೀಬ್ ಮೆಹಫೂಜ್ (22) ಬಂಧಿತ ಆರೋಪಿ.
ಕುಂಬಳೆ ಪೊಲೀಸರಿಗೆ ಲಭಿಸಿದ ಖಚಿತ ಮಾಹಿತಿಯಂತೆ ತಪಾಸಣೆ ನಡೆಸಲಾಗಿದೆ. ಕಿದೂರಿನ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದ ಈತ ಟೆರೇಸ್ ನಲ್ಲಿ ಗಾಂಜಾ ಗಿಡಗಳನ್ನು ಬೆಳೆಸಿದ್ದನು.
20 ಲೀಟರ್ ನೀರಿನ ಬಾಟಲಿಯ ಮೇಲ್ಭಾಗವನ್ನು ಕತ್ತರಿಸಿ ಅದರಲ್ಲಿ ಮಣ್ಣು ತುಂಬಿಸಿ ಗಿಡಗಳನ್ನು ಬೆಳೆಸಲಾಗಿದೆ. ಹೀಗೆ ಮೂರು ಗಿಡಗಳನ್ನು ಪತ್ತೆ ಹಚ್ಚಲಾಗಿದೆ.
ಈತ ಸ್ವಂತ ಬಳಕೆ ಅಲ್ಲದೆ ಮಾರಾಟಕ್ಕಾಗಿ ಗಾಂಜಾ ಗಿಡಗಳನ್ನು ಬೆಳೆಸಿದ್ದ ಎಂದು ತನಿಖೆಯಿಂದ ತಿಳಿದು ಬಂದಿದೆ. ಮಂಗಳೂರಿನ ಕಾಲೇಜೊಂದರಲ್ಲಿ ಕಲಿಯುತ್ತಿದ್ದ ಈತ ಅಲ್ಲಿಂದಲೇ ಗಾಂಜಾ ಗಿಡದ ಬೀಜಗಳನ್ನು ಸಂಗ್ರಹಿಸಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ