ಕಾಸರಗೋಡು: ಅಕ್ರಮ ಮರಳುಗಾರಿಕೆ ವಿರುದ್ಧ ಕುಂಬಳೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಕುಂಬಳೆ ಶಿರಿಯ ಹೊಳೆ ಬದಿಯ ಎಂಟು ಅಕ್ರಮ ಮರಳುಗಾರಿಕಾ ಕೇಂದ್ರಗಳಿಗೆ ದಾಳಿ ನಡೆಸಲಾಗಿದೆ.
ಆರು ದೋಣಿಗಳನ್ನು ಧ್ವಂಸ ಗೊಳಿಸಲಾಗಿದೆ. ಜೆಸಿಬಿ ಯಂತ್ರ ಬಳಸಿ ಮರಳುಗಾರಿಕಾ ಕೇಂದ್ರಗಳನ್ನು ನಾಶಗೊಳಿಸಿದೆ. ಅಕ್ರಮ ಮರಳುಗಾರಿಕೆ ಬಗ್ಗೆ ಲಭಿಸಿದ ದೂರಿನಂತೆ ಕಾಸರಗೋಡು ಡಿವೈಎಸ್ಪಿ ಪಿ.ಕೆ. ಸುಧಾಕರನ್ ನೇತೃತ್ವದಲ್ಲಿ ಕುಂಬಳೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ರಾತ್ರಿ ಸಮಯಗಳಲ್ಲಿ ಅಕ್ರಮ ಮರಳು ಗಾರಿಕೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.