ಕಾಸರಗೋಡು: ಮುಂಬೈಗೆ ತೆರಳುತ್ತಿದ್ದ ಎಕ್ಸ್ಪ್ರೆಸ್ ರೈಲಿನ ಮೇಲೆ ಕಲ್ಲು ತೂರಾಟ ನಡೆಸಿರುವ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ತಿರುವನಂತಪುರ ಮತ್ತು ಮುಂಬೈ ನಡುವೆ ಸಂಚಾರ ನಡೆಸುವ ನೇತ್ರಾವತಿ ಎಕ್ಸ್ಪ್ರೆಸ್ ಮೇಲೆ ಕಲ್ಲು ತೂರಾಟ ನಡೆದಿದೆ.
ಪ್ರಯಾಣಿಕರಿಗೆ ಯಾವುದೇ ಗಾಯಗಳಾಗದ ಕಾರಣ ರೈಲು ಪ್ರಯಾಣ ಮುಂದುವರಿಸಿದೆ. ಶುಕ್ರವಾರ ರಾತ್ರಿ 8.45ರ ವೇಳೆಗೆ ಕುಂಬಳೆಯಲ್ಲಿ ರೈಲು ಸಂಚರಿಸುತ್ತಿದ್ದ ವೇಳೆ ಕಲ್ಲು ತೂರಾಟ ನಡೆದಿದೆ ಎಂದು ರೈಲ್ವೆ ಪೊಲೀಸರು ತಿಳಿಸಿದ್ದಾರೆ.