News Karnataka Kannada
Friday, May 03 2024
ಕಾಸರಗೋಡು

ಕಾಸರಗೋಡು: ಮಂಜೇಶ್ವರಂ ಸ್ನೇಹಾಲಯ ಪುನರ್ವಸತಿ ಕೇಂದ್ರದಲ್ಲಿ ಮದರ್ ತೆರೆಸಾ ದಿನಾಚರಣೆ

Mother Teresa's day celebrations at Manjeswaram Snehalaya Rehabilitation Centre
Photo Credit :

ಕಾಸರಗೋಡು: ಜಿಲ್ಲಾ ಸಾಮಾಜಿಕ ನ್ಯಾಯ ಕಛೇರಿ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಮತ್ತು ಮಂಜೇಶ್ವರ ಸ್ನೇಹಾಲಯ ಚಾರಿಟೇಬಲ್ ಟ್ರಸ್ಟ್ ನೇತೃತ್ವದಲ್ಲಿ ಶುಕ್ರವಾರ ಮದರ್ ತೆರೆಸಾ ದಿನಾಚರಣೆಯನ್ನು ಆಯೋಜಿಸಲಾಗಿತ್ತು.

ಮಂಜೇಶ್ವರಂ ಸ್ನೇಹಾಲಯ ಪುನರ್ವಸತಿ ಕೇಂದ್ರದಲ್ಲಿ ನಡೆದ ಕಾರ್ಯಕ್ರಮವನ್ನು ಉಪನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಕಾರ್ಯದರ್ಶಿ ಬಿ.ಕರುಣಾಕರನ್ ಉದ್ಘಾಟಿಸಿದರು.

ಜಿಲ್ಲಾ ಸಾಮಾಜಿಕ ನ್ಯಾಯ ಅಧಿಕಾರಿ ಶೀಬಾ ಮುಮ್ತಾಜ್ ಅಧ್ಯಕ್ಷತೆ ವಹಿಸಿದ್ದರು. ಸ್ನೇಹಾಲಯ ಚಾರಿಟೇಬಲ್ ಟ್ರಸ್ಟ್‌ನ ಅಧ್ಯಕ್ಷ ಜೋಸೆಫ್ ಕ್ರಾಸ್ತಾ ಮದರ್ ತೆರೆಸಾ ಸ್ಮಾರಕ ಉಪನ್ಯಾಸ ನೀಡಿದರು. ಮಂಜೇಶ್ವರ ಬ್ಲಾಕ್ ಪಂಚಾಯತ್ ಕ್ಷೇಮಾಭಿವೃದ್ಧಿ ಸ್ಥಾಯಿ ಸಮಿತಿ ಅಧ್ಯಕ್ಷ ಅಬ್ದುಲ್ ಹಮೀದ್, ಮಂಜೇಶ್ವರ ಗ್ರಾಮ ಪಂಚಾಯತ್ ಸದಸ್ಯ ಹಾಜೀರ ಮೂಸಾ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವಿಭಾಗಾಧಿಕಾರಿ ಕೆ.ದಿನೇಶ ಮಾತನಾಡಿದರು.

ಜಿಲ್ಲಾ ಸಾಮಾಜಿಕ ನ್ಯಾಯ ಕಛೇರಿಯ ಹಿರಿಯ ಅಧೀಕ್ಷಕ ಎಂ ಅಬ್ದುಲ್ಲಾ ಸ್ವಾಗತಿಸಿ, ಸ್ನೇಹಾಲಯ ವ್ಯವಸ್ಥಾಪಕಿ ವೀಣಾ ಡಿಸೋಜ ವಂದಿಸಿದರು. ಮದರ್ ತೆರೆಸಾ ಅವರ ಜನ್ಮ ದಿನಾಚರಣೆ ಹಿನ್ನಲೆಯಲ್ಲಿ ಜಿಲ್ಲೆಯ 19 ಕೇಂದ್ರಗಳಲ್ಲಿ ಸ್ಮರಣಾರ್ಥ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
176
Stephen K

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು