ಕಾಸರಗೋಡು: ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ 2024 ರ ಮೇ ತಿಂಗಳೊಳಗೆ ಪೂರ್ಣಗೊಳಿಸಲಾಗುವುದು ಎಂದು ಕೇರಳ ಲೋಕೋಪಯೋಗಿ ಸಚಿವ ಪಿ . ಎ ಮುಹಮ್ಮದ್ ರಿಯಾಜ್ ತಿಳಿಸಿದ್ದಾರೆ.
ಅವರು ಮಂಗಳವಾರ ತಲಪಾಡಿ – ಚೆಂಗಳ ನಡುವಿನ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವೀಕ್ಷಿಸಿದ ಬಳಿಕ ಈ ವಿಷಯ ತಿಳಿಸಿದರು.
ಕುಂಬಳೆ ಯ ಮೇಲ್ಸೇತುವೆ 2022 ಡಿಸಂಬರ್ ಹಾಗೂ ಕಾಸರಗೋಡು ಮೇಲ್ಸೇತುವೆಯನ್ನು 2024 ರ ಮೇ 15 ರೊಳಗೆ ಪೂರ್ಣಗೊಳಿಸಲಾಗುವುದು ಎಂದು ಸಚಿವರು ಹೇಳಿದರು.
ಕಾರಗೋಡಿನ ಜನತೆಯ ದಶಕಗಳ ಕನಸಾದ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ನಿಗಧಿತ ಸಮಯದೊಳಗೆ ಪೂರ್ಣಗೊಳಿಸಲಾಗುವುದು. ರಾಜ್ಯದ 9 ಜಿಲ್ಲೆಗಳಲ್ಲಿ ವೇಗದಲ್ಲಿ ಕಾಮಗಾರಿ ನಡೆಯುತ್ತಿದೆ. ಕೆಲ ಜಿಲ್ಲೆಗಳಲ್ಲಿ ಕಾಮಗಾರಿ ನಿಧಾನಗತಿಯಲ್ಲಿ ನಡೆಯುತ್ತಿದೆ . ಈ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ . ಈ ಬಗ್ಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಗಮನಕ್ಕೆ ತರಲಾಗಿದೆ ಎಂದು ಸಚಿವರು ಹೇಳಿದರು.
ಕೆಲ ಸ್ಥಳಗಲ್ಲಿ ಲೋಪ ಗಳ ಬಗ್ಗೆ ಪರಿಸರವಾಸಿಗಳು ಹಾಗೂ ಜನಪ್ರತಿನಿಧಿಗಳು ಗಮನಕ್ಕೆ ತಂದಿದ್ದು , ಈ ಬಗ್ಗೆ ಗಮನ ನೀಡಲಾಗುವುದು . ಕಾಮಗಾರಿ ಆದಷ್ಟು ಶೀಘ್ರ ಪೂರ್ಣಗೊಳಿಸುವ ಗುರಿ ಯೊಂದಿಗೆ ಸಂಸದರು , ಶಾಸಕರು ,ರಾಜಕೀಯ ಪಕ್ಷಗಳ ಸಹಕಾರವನ್ನು ಪಡೆದು ಯೋಜನೆ ಪೂರ್ಣಗೊಳಿಸಲಾಗುವುದು ಎಂದು ಹೇಳಿದರು.
ಸಂಸದ ರಾಜ್ ಮೋಹನ್ ಉಣ್ಣಿ ತ್ತಾನ್ , ಶಾಸಕ ಎನ್ . ಎ ನೆಲ್ಲಿಕುನ್ನು, ಎ . ಕೆ ಎಂ ಅಶ್ರಫ್ , ಜಿಲ್ಲಾಧಿಕಾರಿ ಭಂಡಾರಿ ಸ್ವಾಗತ್ , ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ವಿಭಾಗೀಯ ಅಧಿಕಾರಿ ಬಿ . ಎಲ್ ಮೀನಾ , ಯೋಜನಾ ನಿರ್ದೇಶಕ ಸುನಿಲ್ ಕುಮಾರ್ , ಎಂ . ವಿ ಬಾಲಕೃಷ್ಣನ್ ಮೊದಲಾದವರು ಸಚಿವರ ಜೊತೆಗಿದ್ದರು.