ಕಾಸರಗೋಡು: ಶಾಲಾ ವಾಹನದಡಿಗೆ ಬಿದ್ದು ನರ್ಸರಿ ವಿದ್ಯಾರ್ಥಿನಿ ಮೃತಪಟ್ಟ ದಾರುಣ ಘಟನೆ ಇಂದು ಕಂಬಾರ್ ಸಿರಿಬಾಗಿಲು ಎಂಬಲ್ಲಿ ನಡೆದಿದೆ.
ಸಿರಿ ಬಾಗಿಲಿನ ಮುಹಮ್ಮದ್ ಸುಬೈರ್ ರವರ ಪುತ್ರಿ ಆಯಿಷಾ ಸೆಯಾ (4) ಮೃತ ಪಟ್ಟವಳು. ಮನೆ ಸಮೀಪ ಈ ದುರಂತ ನಡೆದಿದೆ. ಶಾಲೆ ಬಿಟ್ಟು ಮನೆ ಬಳಿ ಬಾಲಕಿಯನ್ನು ಇಳಿಸಿ ಬಸ್ಸನ್ನು ಹಿಂದಕ್ಕೆ ತೆಗೆಯುತ್ತಿದ್ದಾಗ ಅದೇ ಬಸ್ಸಿನಡಿ ಸಿಲುಕಿ ಈ ಘಟನೆ ನಡೆದಿದೆ. ಪರಿಸರ ವಾಸಿಗಳು ಧಾವಿಸಿ ಬಂದು ಕೂಡಲೇ ಕಾಸರಗೋಡಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದರು ವಿದ್ಯಾರ್ಥಿನಿ ಆಗಲೇ ಮೃತ ಪಟ್ಟಿದ್ದಳು. ಕಾಸರಗೋಡು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತಳು ನೆಲ್ಲಿಕುಂಜೆಯ ಖಾಸಗಿ ಶಾಲೆಯ ನರ್ಸರಿ ವಿದ್ಯಾರ್ಥಿನಿಯಾಗಿದ್ದಳು.