ಕಾಸರಗೋಡು: ಕರ್ನಾಟಕದಿಂದ ಕಾಸರಗೋಡಿಗೆ ಕಾರಿನಲ್ಲಿ ಸಾಗಾಟ ಮಾಡುತ್ತಿದ್ದ ನಿಷೇಧಿತ ತಂಬಾಕು ಉತ್ಪನ್ನಗಳನ್ನು ಮಂಜೇಶ್ವರ ಅಬಕಾರಿ ದಳದ ಸಿಬಂದಿಗಳು ವಶಪಡಿಸಿಕೊಂಡಿದ್ದು, ಓರ್ವನನ್ನು ಬಂಧಿಸಿದ್ದಾರೆ.
ಮಧೂರು ಉಳಿಯತ್ತಡ್ಕದ ಹಾಶಿಕುದ್ದಿನ್ (೩೦) ಬಂಧಿತರು. ಶನಿವಾರ ಬೆಳಿಗ್ಗೆ ವಾಹನ ತಪಾಸಣೆ ನಡೆಸಿದಾಗ ಟೊಯೋಟಾ ಕಾರಿನಲ್ಲಿ ಅಕ್ರಮ ಸಾಗಾಟ ಪತ್ತೆಯಾಗಿದೆ. ಸುಮಾರು ಮೂರು ಲಕ್ಷ ರೂ. ಮೌಲ್ಯದ ತಂಬಾಕು ಉತ್ಪನ್ನಗಳನ್ನು ವಶಪಡಿಸಿಕೊಳ್ಳಲಾಗಿದೆ.