ಕಾಸರಗೋಡು: ಟ್ಯಾಂಕರ್ ಲಾರಿ ಹಾಗೂ ಸ್ಕೂಟರ್ ನಡುವೆ ಉಂಟಾದ ಅಪಘಾತದಲ್ಲಿ ಸವಾರ ಮೃತಪಟ್ಟ ಘಟನೆ ವಿದ್ಯಾನಗರದಲ್ಲಿರುವ ಸರಕಾರಿ ಕಾಲೇಜು ಬಳಿ ನಡೆದಿದೆ.
ಓರ್ವ ಗಾಯಗೊಂಡಿದ್ದಾರೆ. ಚಾಲಕ್ಕುಡಿಯ ಎ .ಪಿ ಬಿನೀಶ್ ( ೪೫) ಮೃತಪಟ್ಟವರು. ಜೊತೆಗಿದ್ದ ತಮಿಳುನಾಡಿನ ಆನಂದ್ ಕುಮಾರ್ ಗಾಯಗೊಂಡಿದ್ದು ,ಆಸ್ಪತ್ರೆಗೆ ದಾಖಲಿಸಲಾಗಿದೆ.
ಆನಂದ್ ಕುಮಾರ್ ಚಲಾಯಿಸುತ್ತಿದ್ದ ಬೈಕ್ ಹಾಗೂ ಟ್ಯಾಂಕರ್ ನಡುವೆ ಅಪಘಾತ , ನಡೆದಿದ್ದು ರಸ್ತೆಗೆಸೆಲ್ಪಟ್ಟ ಬಿನೀಶ್ ರನ್ನು ಕಾಸರಗೋಡು ಆಸ್ಪತ್ರೆಗೆ ತಲಪಿಸಿದರೂ ಜೀವ ಉಳಿಸಲಾಗಲಿಲ್ಲ.
ಮೃತದೇಹವನ್ನು ಕಾಸರಗೋಡು ಜನರಲ್ ಮರಣೋತ್ತರ ಪರೀಕ್ಷೆ ಬಳಿಕ ಸಂಬಂಧಿಕರಿಗೆ ಬಿಟ್ಟುಕೊಡಲಾಗಿದೆ . ವಿದ್ಯಾನಗರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.