ಕಾಸರಗೋಡು: ಚಾಲಕನ ನಿಯಂತ್ರಣ ತಪ್ಪಿ ಆಟೋ ತೋಡಿಗೆ ಉರುಳಿದ ಪರಿಣಾಮ ಕೂಲಿ ಕಾರ್ಮಿಕ ಓರ್ವ ಮೃತಪಟ್ಟು, ಚಾಲಕ ಸೇರಿದಂತೆ ಮೂವರು ಗಾಯಗೊಂಡ ಘಟನೆ ಮೊಗ್ರಾಲ್ ಪುತ್ತೂರು ಸಮೀಪ ನಡೆದಿದೆ.
ಮೂಲತಃ ಗದಗ ಸಿತಾರಹಳ್ಳಿಯ ಹೊನ್ನಪ್ಪ ಪೂಜಾರ (೩೧) ಮೃತಪಟ್ಟವರು. ನಗರ ಹೊರವಲಯದ ಸೂರ್ಲು ಮೀಪುಗುರಿಯಲ್ಲಿ ವಾಸವಾಗಿದ್ದರು. ಆಟೋ ಚಾಲಕ ಬೆಳ್ಳೂರಿನ ಝುಬೈರ್ (೩೩) ಸೇರಿದಂತೆ ಮೂವರು ಗಾಯಗೊಂಡಿದ್ದಾರೆ .
ಮೊಗ್ರಾಲ್ ಪುತ್ತೂರು – ಕಂಬಾರ್ ರಸ್ತೆಯ ಎಡಚ್ಚೇರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬಿದ್ದಿದ್ದು, ಪರಿಸರವಾಸಿಗಳು ಆಟೋದಲ್ಲಿ ಸಿಲುಕಿದ್ದವರನ್ನು ಹೊರತೆಗೆದು ಆಸ್ಪತ್ರೆಗೆ ಸಾಗಿಸಿದ್ದು, ಈ ಪೈಕಿ ಹೊನ್ನಪ್ಪ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟರು.
ಮೃತದೇಹವನ್ನು ಕಾಸರಗೋಡು ಜನರಲ್ ಆಸ್ಪತ್ರೆಯ ಶವಗಾರದಲ್ಲಿರಿಸಲಾಗಿದೆ . ಮಾಹಿತಿ ತಿಳಿದು ಹೊನ್ನಪ್ಪ ರವರ ಸಂಬಧಿಕರು ಕಾಸರಗೋಡಿಗೆ ತಲುಪಿದ್ದಾರೆ.
ಬೇಸಿಗೆಯಲ್ಲಿ ಬಿಸಿಲಿನ ತಾಪ, ಕಲುಷಿತ ನೀರು, ಮಾಲಿನಗೊಂಡ ವಾತಾವರಣದಿಂದಾಗಿ ಸಾಕಷ್ಟು ಜನರು ಚರ್ಮದ ಸಮಸ್ಯೆಯನ್ನು ಅನುಭವಿಸುತ್ತಾರೆ. ಅದರಲ್ಲೂ ಡಲ್ಸ್ಕಿನ್ ಇರುವವರೂ…
ಲೋಕಸಭೆ ಚುನಾವಣೆಯ ಐದನೇ ಹಂತದ ಮತದಾನವು ಸೋಮವಾರ (ಮೇ 20) ನಡೆಯಲಿದೆ. ಆರು ರಾಜ್ಯಗಳು ಹಾಗೂ ಎರಡು ಕೇಂದ್ರಾಡಳಿತ ಪ್ರದೇಶಗಳ…
ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಮೇ 20) ರಾಶಿ ಭವಿಷ್ಯದಲ್ಲಿ ಯಾರ ರಾಶಿ…
ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…
ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ.
ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.