News Karnataka Kannada
Saturday, May 04 2024
ಕಾಸರಗೋಡು

ಕಾಸರಗೋಡು: ಪಂಚಲೋಹ ವಿಗ್ರಹ ಕಳವು ಪ್ರಕರಣ- ಓರ್ವ ಬಂಧನ

Panchaloha idol theft case: One arrested
Photo Credit :

ಕಾಸರಗೋಡು: ಮಂಜೇಶ್ವರ ಹೊಸಂಗಡಿಯ ಶ್ರೀ ಅಯ್ಯಪ್ಪ ಕ್ಷೇತ್ರದಲ್ಲಿ ನಡೆದ ಪಂಚಲೋಹ ವಿಗ್ರಹ ಕಳವು ಪ್ರಕರಣಕ್ಕೆ ಸಂಬಂಧಪಟ್ಟಂತೆ ಓರ್ವನನ್ನು ಮಂಜೇಶ್ವರ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಮಂಜೇಶ್ವರ ಮಜಿಬೈಲ್ ನ ಲಕ್ಷ್ಮೀಶ (೪೦) ಬಂಧಿತ ಆರೋಪಿ. ಆಗಸ್ಟ್ ೨೦ ರಂದು ಬೆಳಿಗ್ಗೆ ಕೃತ್ಯ ಬೆಳಕಿಗೆ ಬಂದಿತ್ತು. ಗರ್ಭಗುಡಿಯೊಳಗಿದ್ದ ದೇವರ ಪಂಚ ಲೋಹ ವಿಗ್ರಹವನ್ನು ಕಳವುಗೈದು, ಕ್ಷೇತ್ರದ ಮುಂಭಾಗ ಹಾಗೂ ತೀರ್ಥ ಮಂಟಪದಲ್ಲಿದ್ದ ಕಾಣಿಕೆ ಹುಂಡಿಗಳಿಂದ ಹಣವನ್ನು ದೋಚಲಾಗಿತ್ತು .

ಬಳಿಕ ಹುಂಡಿಗಳನ್ನು ಕ್ಷೇತ್ರ ಸಮೀಪ ಎಸೆದು ಪರಾರಿಯಾಗಿದ್ದನು. ಕಳವುಗೈಯ್ಯಲಾದ ವಿಗ್ರಹ ಪೊದೆಗಳೆಡೆಯಲ್ಲಿ ಪತ್ತೆಯಾಗಿತ್ತು. ಈ ಬಗ್ಗೆ ಪ್ರಕರಣ ದಾಖಲಿಸಿದ ಮಂಜೇಶ್ವರ ಠಾಣಾ ಪೊಲೀಸರು ತನಿಖೆ ನಡೆಸಿದ್ದು, ಓರ್ವ ಆರೋಪಿಯನ್ನು ಮಂಗಳವಾರ ಸಂಜೆ ಬಂಧಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
176
Stephen K

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು