ಕಾಸರಗೋಡು: ದಾಖಲೆಗಳಿಲ್ಲದೆ ಬಸ್ಸಿನಲ್ಲಿ ಸಾಗಾಟ ಮಾಡುತ್ತಿದ್ದ ಸುಮಾರು 41,78,000 ರೂ. ಹಣವನ್ನು ಮಂಜೇಶ್ವರ ಅಬಕಾರಿ ದಳದ ಸಿಬ್ಬಂದಿಗಳು ವಶಪಡಿಸಿ ಕೊಂಡಿದ್ದಾರೆ. ಮಂಗಳೂರಿನಿಂದ ಕಾಸರಗೋಡಿಗೆ ಬರುತ್ತಿದ್ದ ಕರ್ನಾಟಕ ಕೆ ಎಸ್ ಆರ್ ಟಿ ಸಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಹೊನ್ನಾವರದ ಪ್ರಕಾಶ್ ವಿನಾಯಕ ಶೆಟ್ಟಿ (45) ಎಂಬಾತನನ್ನು ವಶಕ್ಕೆ ತೆಗೆದು ಕೊಳ್ಳಲಾಗಿದೆ.
ಈತನ ಬಳಿ ಇದ್ದ ಬ್ಯಾಗ್ ನಲ್ಲಿ ಹಣವನ್ನು ಸಾಗಿಸುತ್ತಿದ್ದನು. ಹೆಚ್ಚಿನ ವಿಚಾರಣೆಗಾಗಿ ನಗದು ಹಾಗೂ ಆರೋಪಿಯನ್ನು ಮಂಜೇಶ್ವರ ಠಾಣಾ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ.