ಕಾಸರಗೋಡು: ಕ್ಷುಲ್ಲಕ ಕಾರಣಕ್ಕೆ ಮರದ ಹಲಗೆಯಿಂದ ಬಡಿದು ತಾಯಿಯನ್ನು ಕೊಲೆಗೈದ ಘಟನೆ ನೀಲೇಶ್ವರದಲ್ಲಿ ನಡೆದಿದೆ.
ನೀಲೇಶ್ವರ ಕಣಿಚ್ಚರದ ರುಕ್ಮಿಣಿ (63) ಕೊಲೆ ಗೀಡಾದವರು. ಕೃತ್ಯ ನಡೆಸಿದ ಪುತ್ರ ಸುಜಿತ್ (34) ನನ್ನು ನೀಲೇಶ್ವರ ಪೊಲೀಸರು ಬಂಧಿಸಿದ್ದಾರೆ. ಈತನನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಾನಸಿಕ ಆರೋಗ್ಯ ಕೇಂದ್ರಕ್ಕೆ ಸೇರಿಸಲಾಗಿದೆ ಗುರುವಾರ ಬೆಳಿಗ್ಗೆ ಘಟನೆ ನಡೆದಿತ್ತು.
ಮೊಬೈಲ್ ಫೋನ್ ಬಳಕೆ ಬಗ್ಗೆ ಉಂಟಾದ ಮಾತಿನ ಚಕಮಕಿ ಕೊಲೆಯಲ್ಲಿ ಕೊನೆಗೊಂಡಿದೆ. ಹಲಗೆಯಿಂದ ತಲೆಗೆ ಬಡಿದ ಪರಿಣಾಮ ಗಂಭೀರ ಗಾಯಗೊಂಡು ಕಣ್ಣೂರಿನ ಆಸ್ಪತ್ರೆಗೆ ದಾಖಲಿಸಲಾಗಿದ್ದರೂ ಚಿಕಿತ್ಸೆಗೆ ಸ್ಪಂದಿಸದೆ ಶನಿವಾರ ಮೃತಪಟ್ಟಿದ್ದಾರೆ. ಪೊಲೀಸರು ಆರೋಪಿಯನ್ನು ಬಂಧಿಸಿ ಜಿಲ್ಲಾಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ನಡೆಸಿದ್ದು, ವೈದ್ಯರು ಈತನಿಗೆ ಮಾನಸಿಕ ಸಮಸ್ಯೆಗಳಿರುವುದಾಗಿ ವೈದ್ಯರು ವರದಿ ನೀಡಿದ್ದಾರೆ. ಈತನನ್ನು ಚಿಕಿತ್ಸೆಗಾಗಿ ಕುದಿರವೆಟ್ಟ ಎಂಬಲ್ಲಿನ ಮಾನಸಿಕ ಆರೋಗ್ಯ ಕೇಂದ್ರಕ್ಕೆ ಸೇರಿಸಲಾಗಿದೆ.