ಕಾಸರಗೋಡು: ಹಲಗೆಯಿಂದ ಬಡಿದು ತಾಯಿಯನ್ನು ಕೊಂದ ಮಗ

ಕಾಸರಗೋಡು: ಕ್ಷುಲ್ಲಕ ಕಾರಣಕ್ಕೆ ಮರದ ಹಲಗೆಯಿಂದ ಬಡಿದು ತಾಯಿಯನ್ನು ಕೊಲೆಗೈದ ಘಟನೆ ನೀಲೇಶ್ವರದಲ್ಲಿ ನಡೆದಿದೆ.

ನೀಲೇಶ್ವರ ಕಣಿಚ್ಚರದ ರುಕ್ಮಿಣಿ (63) ಕೊಲೆ ಗೀಡಾದವರು. ಕೃತ್ಯ ನಡೆಸಿದ ಪುತ್ರ ಸುಜಿತ್ (34) ನನ್ನು ನೀಲೇಶ್ವರ ಪೊಲೀಸರು ಬಂಧಿಸಿದ್ದಾರೆ. ಈತನನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಾನಸಿಕ ಆರೋಗ್ಯ ಕೇಂದ್ರಕ್ಕೆ ಸೇರಿಸಲಾಗಿದೆ ಗುರುವಾರ ಬೆಳಿಗ್ಗೆ ಘಟನೆ ನಡೆದಿತ್ತು.

ಮೊಬೈಲ್ ಫೋನ್ ಬಳಕೆ ಬಗ್ಗೆ ಉಂಟಾದ ಮಾತಿನ ಚಕಮಕಿ ಕೊಲೆಯಲ್ಲಿ ಕೊನೆಗೊಂಡಿದೆ. ಹಲಗೆಯಿಂದ ತಲೆಗೆ ಬಡಿದ ಪರಿಣಾಮ ಗಂಭೀರ ಗಾಯಗೊಂಡು ಕಣ್ಣೂರಿನ ಆಸ್ಪತ್ರೆಗೆ ದಾಖಲಿಸಲಾಗಿದ್ದರೂ ಚಿಕಿತ್ಸೆಗೆ ಸ್ಪಂದಿಸದೆ ಶನಿವಾರ ಮೃತಪಟ್ಟಿದ್ದಾರೆ. ಪೊಲೀಸರು ಆರೋಪಿಯನ್ನು ಬಂಧಿಸಿ ಜಿಲ್ಲಾಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ನಡೆಸಿದ್ದು, ವೈದ್ಯರು ಈತನಿಗೆ ಮಾನಸಿಕ ಸಮಸ್ಯೆಗಳಿರುವುದಾಗಿ ವೈದ್ಯರು ವರದಿ ನೀಡಿದ್ದಾರೆ. ಈತನನ್ನು ಚಿಕಿತ್ಸೆಗಾಗಿ ಕುದಿರವೆಟ್ಟ ಎಂಬಲ್ಲಿನ ಮಾನಸಿಕ ಆರೋಗ್ಯ ಕೇಂದ್ರಕ್ಕೆ ಸೇರಿಸಲಾಗಿದೆ.

Gayathri SG

Recent Posts

ಇಂದು ತಾಯಂದಿರ ದಿನ : ಈ ದಿನದ ಮಹತ್ವ ,ಹಿನ್ನೆಲೆ ಏನು?

ತಾಯಂದಿರ ದಿನ , ತಾಯಂದಿರ ಗೌರವಾರ್ಥ ರಜಾದಿನವನ್ನು ವಿಶ್ವದಾದ್ಯಂತ ದೇಶಗಳಲ್ಲಿ ಆಚರಿಸಲಾಗುತ್ತದೆ. ಅದರ ಆಧುನಿಕ ರೂಪದಲ್ಲಿ ರಜಾದಿನವು ಹುಟ್ಟಿಕೊಂಡಿತುಯುನೈಟೆಡ್ ಸ್ಟೇಟ್ಸ್…

2 mins ago

ಇಂದಿನ ರಾಶಿ ಫಲ : ಯಾರಿಗೆ ಶುಭ, ಯಾರಿಗೆ ಅಶುಭ

ವಾರದ ಆರಂಭದಲ್ಲೇ ಶುಭ ಸುದ್ದಿ. ಮನೆಯಲ್ಲಿ ಕಾರ್ಯಕ್ರಮಗಳು ನಡೆಯಲಿದೆ. ಉದ್ಯೋಗಿಗಳಿಗೆ ಒತ್ತಡ ಹೆಚ್ಚಲಿದ್ದು, ವಾರಾಂತ್ಯದಲ್ಲಿ ಎಲ್ಲವೂ ಸರಿದೂಗಲಿದೆ. ಕಾರ್ಮಿಕರಿಗೆ ಲಾಭ.…

15 mins ago

ಇಂದು ಶಂಕರ ಜಯಂತಿ : ಶಂಕರಾಚಾರ್ಯರ ಕುರಿತ ಕುತೂಹಲಕರ ಸಂಗತಿಗಳು ಇಲ್ಲಿವೆ

ಹೆಸರೇ ಸೂಚಿಸುವಂತೆ, ಆದಿ ಶಂಕರ ಜಯಂತಿಯನ್ನು ಭಾರತೀಯ ತತ್ವಜ್ಞಾನಿ ಮತ್ತು ದೇವತಾಶಾಸ್ತ್ರಜ್ಞ ಆದಿ ಶಂಕರರ ಜನ್ಮದಿನದ ಸವಿ ನೆನಪಿಗಾಗಿ ಆಚರಿಸಲಾಗುತ್ತದೆ.…

25 mins ago

ರಿಚರ್ಡ್‌ ಹ್ಯಾನ್ಸೆನ್‌ಗೆ ಸೆಲ್ಕೋದ ಪ್ರತಿಷ್ಠಿತ ʼಸೂರ್ಯಮಿತ್ರʼ ಪ್ರಶಸ್ತಿ

ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್‌ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂ‍ಸ್ಥೆಗಳ…

8 hours ago

ಜಿಯೋ ಬಂಪರ್‌ ಆಫರ್‌ : 15 ಒಟಿಟಿ ಆ್ಯಪ್ಲಿಕೇಷನ್‌ ಜೊತೆ ಅನ್‌ಲಿಮಿಟೆಡ್ ಡೇಟಾ ಪ್ಲಾನ್

ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್‌ಫ್ಲಿಕ್ಸ್‌ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…

9 hours ago

ಕಾರಿನಲ್ಲಿ ಆಕಸ್ಮಿಕ ಬೆಂಕಿ : ವ್ಯಕ್ತಿ ಸಜೀವ ದಹನ

ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…

9 hours ago