News Karnataka Kannada
Monday, May 13 2024
ಕಾಸರಗೋಡು

ತಮಿಳುನಾಡು ಮೂಲದ ಕಾರ್ಮಿಕನ ಕೊಲೆ ಪ್ರಕರಣ: ಮೂವರ ಬಂಧನ

Tamil Nadu labourer's murder: Three arrested
Photo Credit : News Kannada

ಕಾಸರಗೋಡು: ಮೂರು ದಿನಗಳ ಹಿಂದೆ ನೀಲೇಶ್ವರ ಕೋಟ ಪ್ಪುರದಲ್ಲಿ ತಮಿಳುನಾಡು ಮೂಲದ ಕಾರ್ಮಿಕನ ನಿಗೂಢ ಸಾವು ಪ್ರಕರಣ ಕೊಲೆ ಎಂದು ಸಾಬೀತಾಗಿದ್ದು, ಕೃತ್ಯಕ್ಕೆ ಸಂಬಂಧಪಟ್ಟಂತೆ ಮೂವರನ್ನು ನೀಲೇಶ್ವರ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಎರ್ನಾಕುಲಂ ಕಲಕಂಚೇರಿಯ ಕೆ.ಪಿ ಬೈಜು ( ೪೩) , ಕಲಮಶ್ಯೇರಿಯ ಮುಹಮ್ಮದ್ ಫೈಝಲ್( ೪೨) ನೋರ್ತ್ ಪರವೂರಿನ ಡೇನಿಯಲ್ ಬೆನ್ನಿ(೪೩) ಬಂಧಿತರು.

ತಮಿಳುನಾಡು ಮಧುರೆಯ ರಮೇಶ್ ( ೪೩) ಎಂಬವರ ಕೊಲೆಗೆ ಸಂಬಂಧಪಟ್ಟಂತೆ ಆರೋಪಿಗಳನ್ನು ಬಂಧಿಸಲಾಗಿದೆ.

ಮಾರ್ಚ್ ನಾಲ್ಕರಂದು ರಮೇಶ್ ವಾಸಸ್ಥಳದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತ್ತೆಯಾಗಿದ್ರು ಸ್ಥಳೀಯರು ನೀಡಿದ ಮಾಹಿತಿಯಂತೆ ಪೊಲೀಸರು ಸ್ಥಳಕ್ಕಾಮಿಸಿ ತನಿಖೆ ನಡೆಸಿದ್ದರು.

ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿ ದ್ದರು. ಮೃತದೇಹವನ್ನು ಮರಣೋತ್ತರ ಪರೀಕ್ಷೆ ನಡೆಸಿದಾಗ ತಲೆಗೆ ಬಿದ್ದ ಬಲವಾದ ಪೆಟ್ಟು ಸಾವಿಗೆ ಕಾರಣ ಎಂದು ತಿಳಿದು ಬಂದಿತ್ತು.

ಬಾಡಿಗೆ ಮನೆಯೆಲ್ಲಿ ವಾಸವಾಗಿದ್ದ ೧೧ ಮಂದಿಯನ್ನು ಪೊಲೀಸರು ವಿಚಾರಣೆ ನಡೆಸಿದ್ದರು. ತನಿಖೆಯಿಂದ ಆರೋಪಿಗಳ ಸುಳಿವು ಲಭಿಸಿತ್ತು. ಆರೋಪಿಗಳು ಕೇಳಿದ್ದ ಹಣವನ್ನು ನೀಡ ಡಿರುವುದೇ ಕೊಲೆಗೆ ಕಾರಣ ಎನ್ನಲಾಗಿದೆ. ಕೋಟೆಪ್ಪುರ – ಕಡಿಂಞಮೂಲೆ ಸೇತುವೆ ನಿರ್ಮಾಣ ಕಾಮಗಾರಿಗೆ ರಮೇಶ್ ಹಾಗೂ ಇತರರು ಬಂದಿದ್ದರು. ರಮೇಶ್ ಹಾಗೂ ಆರೋಪಿಗಳು ಸೇರಿದಂತೆ ಒಟ್ಟು ೧೧ ಮಂದಿ ಈ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.

ಕೊಲೆಗೆ ಬಳಸಿದ್ದ ಕಬ್ಬಿಣದ ರಾಡ್ ನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಈ ಪೈಕಿ ಪ್ರಥಮ ಆರೋಪಿ ಬೈಜು ವಿರುದ್ಧ ಎರ್ನಾಕುಲಂ ಜಿಲ್ಲೆಯಲ್ಲಿ ೧೪ ಕ್ಕೂ ಅಧಿಕ ಪ್ರಕರಣಗಳಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು