ಕಾಸರಗೋಡು: ಆಟೋ ರಿಕ್ಷಾದಲ್ಲಿ ಮಾರಕಾಸ್ತ್ರಗಳ ಸಹಿತ ತಿರುಗಾಡುತ್ತಿದ್ದ ಯುವಕನನ್ನು ಪೊಲೀಸರ ಕಸ್ಟಡಿಯಿಂದ ಬಲವಂತವಾಗಿ ಬಿಡುಗಡೆಗೊಳಿಸಿದ್ದ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಮೂವರನ್ನು ಮಂಜೇಶ್ವರ ಪೊಲೀಸರು ಬಂಧಿಸಿದ್ದು, ಇವರಿಂದ ರಿವಾಲ್ವರ್ ಹಾಗೂ ಸಜೀವ ಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ.
ಮುಹಮ್ಮದ್ ರಹೀಸ್ (25), ಮುಹಮ್ಮದ್ ಹನೀಫ್ (40) ಮತ್ತು ಮುಹಮ್ಮದ್ ರಿಯಾಝ್ (40) ಬಂಧಿತರು. ಉಪ್ಪಳ ಮಜಲ್ ನಲ್ಲಿ ಆಟೋ ರಿಕ್ಷಾದಲ್ಲಿ ಸಂಚರಿಸುತ್ತಿದ್ದ ಮೂವರನ್ನು ವಶಕ್ಕೆ ತೆಗೆದುಕೊಂಡು ಆಟೋವನ್ನು ತಪಾಸಣೆ ನಡೆಸಿದಾಗ ಮಾರಕಾಸ್ತ್ರಗಳನ್ನು ವಶಪಡಿಸಿಕೊಳ್ಳಕಾಗಿದೆ.