ಕಾಸರಗೋಡು: ಭಾರೀ ಮಳೆಯಿಂದ ಮಧೂರಿನ ೧೫ ಕ್ಕೂ ಅಧಿಕ ಮನೆಗಳಿಗೆ ನೀರು ನುಗ್ಗಿದ್ದು, ಸಿಲುಕಿದ್ದ ೬೦ ಮಂದಿಯನ್ನು ಅಗ್ನಿಶಾಮಕ ದಳದ ಸಿಬ್ಬಂದಿಗಳು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದರು.
ಮಧುವಾಹಿನಿ ಹೊಳೆ ಉಕ್ಕಿ ಹರಿಯುತ್ತಿದ್ದು, ಸುತ್ತಮುತ್ತಲಿನ ಪ್ರದೇಶದಲ್ಲಿ ನೆರೆ ಹಾವಳಿ ಉಂಟಾಗಿದೆ. ತೇಜಸ್ವಿನಿ ನದಿ ಉಕ್ಕಿ ಹರಿಯುತ್ತಿದ್ದು, ಇದರಿಂದ ಹಲವು ಮನೆಗಳು ಅಪಾಯದ ಸ್ಥಿತಿಯಲ್ಲಿದೆ.
ಕರಿವೇ ಡಗ ಚೆಂಬ್ರಕ್ಕಲ್ ಕಾಲನಿಗೆ ನೆರೆ ನೀರು ನುಗ್ಗಿದ್ದು , ೧೨ ಕುಟುಂಬಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಸೈ೦ಟ್ ಮೇರಿಸ್ ಎಲ್ ಪಿ . ಶಾಲೆಯಲ್ಲಿ ವಿಶೇಷ ಕೇಂದ್ರವನ್ನು ತೆರೆಯಲಾಗಿದೆ.