ಕಾಸರಗೋಡು: ನಾಲ್ಕು ತಿಂಗಳ ಹಿಂದೆ ಕೇರಳ ರಾಜ್ಯ ಲಾಟರಿಯಲ್ಲಿ 70 ಲಕ್ಷ ರೂ. ಗೆದ್ದಿದ್ದ ಯುವಕನೋರ್ವ ಬೇಕರಿ ಅಂಗಡಿಯೊಳಗಡೆ ನೇಣುಬಿಗಿದು ಆತ್ಮಹತ್ಯೆ ಗೈದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಗರದ ನೆಲ್ಲಿಕುಂಜೆಯಲ್ಲಿ ನಡೆದಿದೆ.
ಬಂಗ್ರಗುಡ್ಡೆಯ ವಿವೇಕ್ ಶೆಟ್ಟಿ (38) ಮೃತ ಪಟ್ಟವರು. ಬೆಳಿಗ್ಗೆ 10 ಗಂಟೆ ಸುಮಾರಿಗೆ ನೆಲ್ಲಿಕುಂಜೆ ರಸ್ತೆಯ ಬೇಕರಿ ಅಂಗಡಿಯೊಳಗಡೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಶಟರ್ ಮುಚ್ಚಿರುವುದರಿಂದ ಸಂಶಯಗೊಂಡು ಸಹೋದರ ತೊರೆದು ನೋಡಿದಾಗ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ.
ಮೃತದೇಹವನ್ನು ಕಾಸರಗೋಡು ಜನರಲ್ ಆಸ್ಪತ್ರೆಯ ಶವಗಾರದಲ್ಲಿರಿಸಲಾಗಿದೆ. ವಿವೇಕ್ ಗೆ ನಾಲ್ಕು ತಿಂಗಳ ಹಿಂದೆ ಕೇರಳ ರಾಜ್ಯ ಲಾಟರಿಯ ಪ್ರಥಮ ಬಹುಮಾನ 70 ಲಕ್ಷ ರೂ. ಲಭಿಸಿತ್ತು. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಕಾಸರಗೋಡು ನಗರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
ಯುನೈಟೆಡ್ ಅರಬ್ ಎಮಿರೇಟ್ಸ್ನ ರಾಯಲ್ ಮನೆತನದ ಸದಸ್ಯ ಶೇಖ್ ಹಝಾ ಬಿನ್ ಸುಲ್ತಾನ್ ಬಿನ್ ಜಾಯೆದ್ ಅಲ್ ನಹ್ಯಾನ್ ನಿಗೂಢವಾಗಿ…
ಮದರ ತೆರೆಸಾ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಹಾಗೂ ನವೀನ ಪಬ್ಲಿಕ್ ಸ್ಕೂಲ್ ವತಿಯಿಂದ ಬೀದರ ನಗರದ ನೌಬಾದ ಹತ್ತಿರ…
ರಾಮನಗರ ತಾಲೂಕಿನ ಕನ್ನಮಂಗಲದೊಡ್ಡಿ ಗ್ರಾಮದಲ್ಲಿ ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ನಡೆದಿದೆ.
ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…
ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.
ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…