ಪುತ್ತೂರು: ಸರಕಾರ ಬದಲಾದ ತಕ್ಷಣ ಏನು ಬೇಕಾದರು ಮಾಡಬಹುದೇ? ಇದು ನೂರಕ್ಕೆ ನೂರು ಕಾಂಗ್ರೆಸ್ ಮಾಡಿದ ಕಿತಾಪತಿ ಎಂದು ಡಾ.ಪ್ರಭಾಕರ ಭಟ್ ಕಲ್ಲಡ್ಕ ಅವರು ಹೇಳಿದ್ದಾರೆ. ಪೊಲೀಸರಿಂದ ಹಲ್ಲೆಗೊಳಗಾಗಿ ಗಾಯಗೊಂಡು ಪುತ್ತೂರು ಆಸ್ಪತ್ರೆಯಲ್ಲಿ ದಾಖಲಾದವರನ್ನು ಭೆಟಿ ಮಾಡಿ ವಿಚಾರಿಸಿದ ಅವರು ಪತ್ರಿಕಾ ಮಾಧ್ಯಮದ ಜೊತೆ ಮಾತನಾಡಿದರು. ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿದ ಡಿವೈಎಸ್ಪಿ ಅವರನ್ನು ಅಮಾನತು ಮಾಡಬೇಕು. ಕಾರ್ಯಕರ್ತರಿಂದ ಸಣ್ಣ ಪುಟ್ಟ ವ್ಯತ್ಯಾಸ ಆಗುತ್ತದೆ. ಹಾಗೆಂದು ಅದು ಅಕ್ಷಮ್ಯ ಅಪರಾಧ ಅಲ್ಲ. ನಾವು ಇದನ್ನು ಹೀಗೆ ಬಿಡುವುದಿಲ್ಲ.ಇದರ ಹಿಂದಿನ ಶಕ್ತಿ ಯಾರೆಂದು ಗೊತ್ತಾಗಬೇಕು.ಯಾರ ಒತ್ತಡ ಎಂದು ಹೇಳಲಿ. ಹಿಡಿ ತಡಿ ಬಡಿ ಎಂದು ನಾವು ಇವತ್ತಿನ ತನಕ ಯಾರಿಗೂ ಹೇಳಲಿಲ್ಲ. ಸರಕಾರ ಬದಲಾದ ಕೂಡಲೆ ಇಂತಹ ಘಟನೆ ನಡೆಯುವುದು ಒಳ್ಳೆಯ ಲಕ್ಷಣ ಅಲ್ಲ ಎಂದು ಅವರು ಹೇಳಿದರು.
ಈ ಸಂದರ್ಭ ಕಿಶೋರ್ ಬೊಟ್ಯಾಡಿ, ಮುರಳಿಕೃಷ್ಣ ಹಸಂತಡ್ಕ ಸಹಿತ ಬಿಜೆಪಿಯ ಹಲವಾರು ಮಂದಿ ಜೊತೆಗಿದ್ದರು.
ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ಆರ್ಸಿಬಿ ಮತ್ತು ಗುಜರಾತ್ ಟೈಟನ್ಸ್ ಮಧ್ಯೆ ನಡೆದ ರೋಚಕ ಪಂದ್ಯದಲ್ಲಿ 152 ರನ್ ಗಳಿಸುವ ಮೂಲಕ ಆರ್ಸಿಬಿ…
ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ನಡೆಯುತ್ತಿರುವ ರೋಚಕ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು 19.3 ಓವರ್ಗಳಲ್ಲಿ 147…
ಪೇಟಿಎಂನ ಮಾತೃ ಸಂಸ್ಥೆಯಾಗಿರುವ ಒನ್ 97 ಕಮ್ಯುನಿಕೇಷನ್ಸ್ ಅಧ್ಯಕ್ಷ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭವೇಶ್ ಗುಪ್ತಾ ಅವರು ತಮ್ಮ ಹುದ್ದೆಗೆ…
ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸತ್ತೇಗಾಲ ವಿವಿಧಡೆ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಶಾಸಕ ಎಂ.ಆರ್ ಮಂಜುನಾಥ್ ಭೇಟಿ ನೀಡಿ ಪರಿಶೀಲನೆ…
ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಇಂದು (ಶನಿವಾರ) ಭಾರತೀಯ ವಾಯುಪಡೆ ಬೆಂಗಾವಲು ಪಡೆ ವಾಹನದ ಮೇಲೆ ಭಯೋತ್ಪಾದಕರು ದಾಳಿ…
ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಿದ್ದಾಪುರದಲ್ಲಿ ನಡೆದ ಬಿಜೆಪಿಯ ಬೃಹತ್ ರೋಡ್ ಶೋ ನಲ್ಲಿ ಮಂಗಳೂರು ನಗರ ದಕ್ಷಿಣದ ಶಾಸಕರಾದ ವೇದವ್ಯಾಸ್…