News Karnataka Kannada
Sunday, May 05 2024
ಕರಾವಳಿ

ಹಾಡ ಹಗಲೇ ಮನೆಯಿಂದ ಲಕ್ಷಾಂತರ ರೂ. ಬೆಲೆ ಬಾಳುವ ಚಿನ್ನಾಭರಣ ಕಳವು

Lakhs of money from home during the day. Valuable jewelery stolen
Photo Credit :

ಪುತ್ತೂರು: ಹಾಡ ಹಗಲೇ ಮನೆಯೊಂದರ ಬೀಗ ಮುರಿದು ಒಳನುಗ್ಗಿದ ಕಳ್ಳರು ಲಕ್ಷಾಂತರ ಬೆಲೆಬಾಳುವ ಚಿನ್ನಾಭರಣ ಮತ್ತು ನಗದು ಹಣ ಕಳವು ಮಾಡಿದ ಘಟನೆ ಪುತ್ತೂರು ನಗರದ ಹೊರವಲಯದ ಬನ್ನೂರಿನಲ್ಲಿ ಸೋಮವಾರ ನಡೆದಿದೆ.

ಬನ್ನೂರು ಗ್ರಾಮದ ಕುಂಟ್ಯಾನ ಸದಾಶಿವ ದೇವಳದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಮೌನೀಶ್ ಅವರ ಮನೆಯಿಂದ ಕಳ್ಳತನ ನಡೆದಿದೆ. ಸೋಮವಾರ ಬೆಳಿಗ್ಗೆ ಮನೆಮಂದಿ ಮನೆಗೆ ಬೀಗ ಹಾಕಿ ಕೆಲಸದ ನಿಮಿತ್ತ ಹೊರಗೆ ಹೋಗಿದ್ದರು.ಮಧ್ಯಾಹ್ನ ೧೨ ಗಂಟೆಯ ವೇಳೆಗೆ ಹಿಂತಿರುಗಿ ಬಂದಾಗ ಮನೆಯ ಹಿಂಬಾಗಿಲಿನ ಬೀಗ ಮುರಿದು ಕಳ್ಳರು ಒಳಹೊಕ್ಕು ಕಳ್ಳತನ ಮಾಡಿರುವುದು ಗಮನಕ್ಕೆ ಬಂದಿದೆ. ಮನೆಯ ಹಿಂಬಾಗಿಲಿನ ಬೀಗ ಮುರಿದು ಒಳನುಗ್ಗಿದ ಕಳ್ಳರು ಚಿನ್ನದ ಸರ, ಚಿನ್ನದ ಕರಿಮಣಿ ಸರ, ಚಿನ್ನದ ಬ್ರಾಸ್ಲೆöÊಟ್, ಚಿನ್ನದ ೧೩ ಉಂಗುರ, ಚಿನ್ನದ ೨ ಕೈಬಳೆ ಸಹಿತ ರೂ.೬.೯೦ ಲಕ್ಷ ಬೆಲೆ ಬಾಳುವ ೧೫೨ ಗ್ರಾಂ ಚಿನ್ನಾಭರಣ ರೂ.೫೦ ಸಾವಿರ ನಗದು ಹಣವನ್ನು ಕಳವು ಮಾಡಿರುವುದಾಗಿ ತಿಳಿದು ಬಂದಿದೆ.

ಘಟನಾ ಸ್ಥಳಕ್ಕೆ ಡಿವೈಎಸ್ಪಿ ಡಾ.ಗಾನ ಪಿ.ಕುಮಾರ್, ಪುತ್ತೂರು ನಗರ ಠಾಣೆಯ ಇನ್ಸ್ಪೆಕ್ಟರ್ ಸುನಿಲ್‌ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸ್ಥಳಕ್ಕೆ ಸಿಬ್ಬಂದಿಗಳಾದ ಸ್ಕರಿಯ, ವಸಂತ ಗೌಡ, ಸುಬ್ರಮಣ್ಯ ಹಾಗೂ ಪೊಲೀಸ್ ಶ್ವಾನದಳ ಮತ್ತು ಬೆರಳಚ್ಚು ತಜ್ಞರನ್ನು ಕರೆಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು