News Karnataka Kannada
Saturday, May 04 2024
ಕರಾವಳಿ

ಕರುಳಬಳ್ಳಿಯನ್ನೇ ಕೊಂದ ತಾಯಿ, ಮಧುಗಿರಿ ಪಟ್ಟಣದಲ್ಲಿ ಅಮಾನವೀಯ ಘಟನೆ

Magu Death
Photo Credit :

ಮಧುಗಿರಿ: ಒಂದು ವರ್ಷದ ಹೆಣ್ಣು ಮಗುವನ್ನು ತಾಯಿ ಬ್ಲೇಡಿನಿಂದ ಕೊಯ್ದು ಕೊಲೆ ಮಾಡಿರುವ ಘಟನೆ ತುಮಕೂರು  ಜಿಲ್ಲೆಯ ಮಧುಗಿರಿ ಪಟ್ಟಣದ ತಿಪ್ಪಾಪುರ ಚತ್ರದ ಬಳಿ ನಡೆದಿದೆ.  ಮನೆಯಲ್ಲಿ ಆಟವಾಡುತ್ತಿದ್ದ ಮಗುವಿನ ಕೈಯನ್ನ ಕೊಯ್ದು ತಾಯಿ ಕೊಲೆ ಮಾಡಿದ್ದು ತೀವ್ರ ರಕ್ತಸ್ರಾವದಿಂದ ಮಗು ಸಾವನ್ನಪ್ಪಿದ್ದು ಘಟನೆಯಲ್ಲಿ ಮೃತಪಟ್ಟ ಮಗುವನ್ನು ಕ್ರಿತಿಷ್ ಎಂದು ಗುರುತಿಸಲಾಗಿದೆ.

ಬಳಿಕ ತಾನು ಕೂಡ ಕುತ್ತಿಗೆ ಕುಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ತಾಯಿ ಶ್ವೇತಾಳನ್ನ ಅಕ್ಕಪಕ್ಕದ ನಿವಾಸಿಗಳು ಆಸ್ಪತ್ರೆಗೆ ದಾಖಲಿಸಿದ್ದು ಗಾಯಗೊಂಡಿರುವ ತಾಯಿ ಶ್ವೇತಾಳನ್ನ ತುಮಕೂರು ಜಿಲ್ಲಾ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮಧುಗಿರಿ ನಿವಾಸಿ ಶಿವಾನಂದ ಎಂಬುವರ ಪತ್ನಿಯಾಗಿರುವ ಶ್ವೇತ ಮಾನಸಿಕ ಅಸ್ವಸ್ಥೆಯಾಗಿದ್ದು ಇತ್ತೀಚಿಗೆ ಬೆಂಗಳೂರಿನ ನಿಮಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ಬಂದಿದ್ದರು.
ಮಧುಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು