ಮಂಗಳೂರು: ಆಗಸ್ಟ್ 1ರಿಂದ ಆಳ ಸಮುದ್ರ ಮೀನುಗಾರಿಕೆ ಆರಂಭ

ಮಂಗಳೂರು: ಕರಾವಳಿಯಲ್ಲಿ ಸುಮಾರು 2 ತಿಂಗಳ ಕಾಲ ಸ್ಥಗಿತಗೊಂಡಿದ್ದ ಮೀನುಗಾರಿಕೆ ಆಗಸ್ಟ್ 1ರಂದು ಮತ್ತೆ ಆರಂಭಗೊಳ್ಳಲಿದ್ದು, ಮೀನುಗಾರರು ಭರದ ಸಿದ್ಧತೆ ನಡೆಸಿದ್ದಾರೆ.

ಪ್ರಸ್ತುತ ಮೀನುಗಾರಿಕೆ ಹಂಗಾಮದಲ್ಲಿ ಉತ್ತಮ ಫಸಲಿನ ನಿರೀಕ್ಷೆಯೊಂದಿಗೆ ಕಡಲಿಗಿಳಿಯಲು ಮೀನುಗಾರರು ಸಿದ್ಧತೆ ಮಾಡಿಕೊಂಡಿದ್ದಾರೆ. ಸಮುದ್ರದಲ್ಲಿ ಮತ್ಸ್ಯ ಸಂಪತ್ತು ಹೇರಳವಾಗಿ ದೊರೆಯುವಂತೆ ಮತ್ತು ಯಾವುದೇ ಅವಘಢ ಸಂಭವಿಸದಂತೆ ಸಮುದ್ರರಾಜ ಹಾಗೂ ತಮ್ಮ ಇಷ್ಟದೇವರಲ್ಲಿ ಮೊರೆ ಹೋಗಿದ್ದಾರೆ.

ಮೀನು ಮೊಟ್ಟೆ ಇಡುವ ಸಮಯದಲ್ಲಿ ಮೀನುಗಾರಿಕೆಗೆ ಕರಾವಳಿಯಲ್ಲಿ ನಿಷೇಧವಿರುತ್ತದೆ. ಕಡಲಿನಲ್ಲಿ ಮತ್ಸ್ಯ ಸಂಪತ್ತಿನ ವೃದ್ಧಿಯ ಆಶಯ ಈ ನಿಷೇಧದ ಉದ್ದೇಶವಾಗಿದೆ. ಮೀನುಗಾರಿಕೆ ಸ್ಥಗಿತ ಸಮಯದಲ್ಲಿ ಯಾಂತ್ರೀಕೃತ ದೋಣಿಯ ಮೂಲಕ ಆಳ ಸಮುದ್ರ ಮೀನುಗಾರಿಕೆ ನಡೆಸುವುದಕ್ಕೆ ನಿಷೇಧವಿರುತ್ತದೆ. ಆದರೆ ನಾಡದೋಣಿ ಮೂಲಕ ಸಮುದ್ರ ಮೀನುಗಾರಿಕೆಗೆ ಅವಕಾಶವಿರುತ್ತದೆ.

ಮೀನುಗಾರಿಕೆ ನಿಷೇಧ ಸಮಯದಲ್ಲಿ ಸಾಮಾನ್ಯವಾಗಿ ಮೀನಿನ ರೇಟ್ ಜಾಸ್ತಿಯಾಗುತ್ತದೆ. ಕೆಜಿಗೆ 200 ರೂಪಾಯಿಗೆ ಸಿಗುವ ಬಂಗುಡೆ ಮೀನು ಕೆಜಿಗೆ 400ರಿಂದ 450 ರೂಪಾಯಿ ಆಗುತ್ತದೆ. ಉಳಿದ ಮೀನಿನ ಮಾರುಕಟ್ಟೆ ಮೌಲ್ಯ ಕೂಡ ಡಬಲ್ ಆಗುತ್ತದೆ. ಆಳ ಸಮುದ್ರ ಮೀನುಗಾರಿಕೆ ನಿಷೇಧ ಸಮಯದಲ್ಲಿ ನದಿ, ಹೊಳೆ, ತೋಡು, ಕೆರೆ ಮೀನುಗಾರಿಕೆಗೆ ಬಹಳ ಬೇಡಿಕೆ ಇರುತ್ತದೆ. ಹೊಳೆ ಮೀನು ಪ್ರಿಯರ ಸಮುದಾಯವೇ ಕರಾವಳಿಯಲ್ಲಿದೆ.

ದೋಣಿಗಳಲ್ಲಿ ದುಡಿಯುವವರಲ್ಲಿ ಬಹುಪಾಲು ಆಂಧ್ರ, ಒಡಿಶಾ, ತಮಿಳುನಾಡು ಸೇರಿದಂತೆ ಹೊರ ರಾಜ್ಯಗಳಿಗೆ ಸೇರಿದವರಾಗಿದ್ದಾರೆ. ಮೀನುಗಾರಿಕೆ ನಿಷೇಧ ಇರುವುದರಿಂದ ಅವರೆಲ್ಲ ರಜೆಯಲ್ಲಿ ಊರಿಗೆ ತೆರಳಿದ್ದಾರೆ. ಆದರೆ ಮೀನುಗಾರಿಕೆ ಶುರುವಾಗುವ ದಿನ ಹತ್ತಿರ ಬರಲಾರಂಭಿಸಿರುವುದರಿಂದ ಅವರು ಮತ್ತೆ ಮಂಗಳೂರಿನತ್ತ ಮುಖ ಮಾಡಿದ್ದಾರೆ.

ಜು. 31ಕ್ಕೆ ಐಸ್ ಪ್ಲಾಂಟ್ ಗಳು ಪೂರ್ಣ ಪ್ರಮಾಣದಲ್ಲಿ ಕಾರ್ಯಾರಂಭಿಸಲಿದೆ. ಮೀನುಗಾರಿಕೆಗೆ ಬೋಟುಗಳನ್ನು, ಎಂಜಿನ್ ಗಳನ್ನು ದುರಸ್ತಿಗೊಳಿಸಿ ಹಾಗೂ ಬಲೆಗಳನ್ನು ಸಿದ್ಧಗೊಳಿಸುವ ಕಾರ್ಯ ನಡೆದಿದೆ.

Sneha Gowda

Recent Posts

ಪರಿಷತ್ ಚುನಾವಣೆಯಲ್ಲೂ ಜೆಡಿಎಸ್ ಜತೆ ಮೈತ್ರಿ ಮುಂದುವರಿಕೆ: ಬಿ.ಎಸ್.ಯಡಿಯೂರಪ್ಪ

ಮುಂಬರುವ ವಿಧಾನಪರಿಷತ್ ಚುನಾವಣೆಯಲ್ಲೂ ಜೆಡಿಎಸ್-ಬಿಜೆಪಿಮೈತ್ರಿ ಮುಂದುವರಿಯಲಿದ್ದು, ಮೈತ್ರಿಗೆ ಯಾವುದೇ ಭಂಗ ಆಗುವುದಿಲ್ಲ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ…

15 mins ago

ವೇಣುಗೋಪಾಲಸ್ವಾಮಿ ದೇಗುಲ ಬಳಿ ಅಡ್ಡಾಡುತ್ತಿರುವ ಒಂಟಿ ಗಜ

ಪ್ರತಿಷ್ಠಿತ ಇತಿಹಾಸ ಪ್ರಸಿದ್ಧ ಶ್ರೀ ಹಿಮವದ್ ವೇಣುಗೋಪಾಲಸ್ವಾಮಿ ಬೆಟ್ಟದ ದೇಗುಲ ಆವರಣದ ಬಳಿ ಎಂದಿನಂತೆ ಆಗಮಿಸಿದ ಒಂಟಿ ಆನೆ ವಾಪಾಸ್…

33 mins ago

ಕಾಡಾನೆಯಿಂದ ಬೆಳೆ ನಾಶ: ಮನನೊಂದು ರೈತ ಆತ್ಮಹತ್ಯೆ

ಸಾಲ ಮಾಡಿ ಬೆಳೆದ ಬೆಳೆಯನ್ನು ಕಾಡಾನೆ ಹಿಂಡುಗಳು ನಾಶ ಮಾಡಿದ್ದರಿಂದ ಮನನೊಂದು ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೇಲೂರು ತಾಲೂಕಿನ ಅರೇಹಳ್ಳಿ ಹೋಳಿಯ ಚಿಕ್ಕಸಾಲಾವರದ ಬಾವಿಕಟ್ಟೆ ಗ್ರಾಮದಲ್ಲಿ ನಡೆದಿದೆ.

35 mins ago

ಬಂಡೀಪುರ ಪ್ರವೇಶದ್ವಾರದ ಬಳಿ ಕೆಟ್ಟು ನಿಂತ ಲಾರಿ: ಸಂಚಾರಕ್ಕೆ ಅಡ್ಡಿ

ಬಂಡೀಪುರ ಪ್ರವೇಶದ್ವಾರದ ಬಳಿ ಭಾರಿ ವಾಹನ ಕೆಟ್ಟು ನಿಂತ ಪರಿಣಾಮ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರಕ್ಕೆ ಅಡ್ಡಿಯುಂಟಾಯಿತು. ಕಿಲೋಮೀಟರ್ ಗಟ್ಟಲೆ…

50 mins ago

ಗೋಪಾಲಸ್ವಾಮಿ ಬೆಟ್ಟಕ್ಕೆ ಬಸ್ ವ್ಯವಸ್ಥೆ ಇಲ್ಲದೆ ಬೆಟ್ಟದ ತಪ್ಪಲಿನಲ್ಲೇ ನಿಂತ ಭಕ್ತರು

ವಾರಾಂತ್ಯದ ರಜೆ ಹಿನ್ನೆಲೆ ಇತಿಹಾಸ ಪ್ರಸಿದ್ಧ ಶ್ರೀ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಸಹಸ್ರಾರು ಮಂದಿ ಪ್ರವಾಸಿಗರು ಹಾಗೂ ಭಕ್ತಗಣ ಆಗಮಿಸಿದ್ದರು…

52 mins ago

ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದರಲ್ಲಿ ಮಾಜಿ ಶಾಸಕ, ಬಿಜೆಪಿ ರಾಜ್ಯ ಪ್ರಧಾನ…

1 hour ago