ಕೊಣಾಜೆ : ಠಾಣೆ ವ್ಶಾಪ್ತಿಯ ಅಸೈಗೋಳಿಯಲ್ಲಿ ಅಳವಡಿಸಿದ್ದ ಅಂಬೇಡ್ಕರ್ ಜಯಂತಿ ಫ್ಲೆಕ್ಸ್ ಹಾನಿಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಬಂಧಿತರನ್ನು ಅಸೈಗೋಳಿ ನಿವಾಸಿ ಶರಣ್ (24) ಮತ್ತು ಹರೇಕಳ ನಿವಾಸಿ ಸುಜಿತ್ (26) ಎಂದು ತಿಳಿದುಬಂದಿದೆ. ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಈ ಕೃತ್ಯವೆಸಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.