News Karnataka Kannada
Monday, May 06 2024
ಮಂಗಳೂರು

ಅಂಬ್ಯುಲೆನ್ಸ್ ಸಂಚಾರಕ್ಕೆ ಅಡ್ಡಿ: ಮಂಗಳೂರಿನಲ್ಲಿ ಕಾರು ಚಾಲಕ ಅರೆಸ್ಟ್

Ambulence Mng 20072021
Photo Credit :

ಮಂಗಳೂರು: ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಿಂದ ಮಂಗಳೂರಿನ ಆಸ್ಪತ್ರೆಗೆ ರೋಗಿಯೊಬ್ಬರನ್ನು ಆ್ಯಂಬುಲೆನ್ಸ್‌ನಲ್ಲಿ ಕರೆದುಕೊಂಡು ಹೋಗುತ್ತಿದ್ದ ವೇಳೆ ಸುಗಮ ಸಂಚಾರಕ್ಕೆ ಅಡ್ಡಿಪಡಿಸಿದ ಆರೋಪದಡಿ ಮಂಗಳೂರು ಪೊಲೀಸರು ಚಾಲಕನನ್ನು ಬಂಧಿಸಿದ್ದಾರೆ.

ಬಂಧಿತ ಚಾಲಕನನ್ನು ಕುಂಪಲದ ನಿವಾಸಿ ಚರಣ್ ಎಂದು ಗುರುತಿಸಲಾಗಿದೆ. ಅಂಬುಲೆನ್ಸ್ ಗೆ ಅಡ್ಡಿಪಡಿಸಿದ ಇರ್ಟಿಗಾ ಕಾರನ್ನು ಕೂಡ ಮಂಗಳೂರು ಸಂಚಾರ ದಕ್ಷಿಣ ಠಾಣೆಯ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ‌. ದೇರಳಕಟ್ಟೆಯಿಂದ ಮಂಗಳೂರಿಗೆ ತುರ್ತಾಗಿ ಬರುತ್ತಿದ್ದ ಆ್ಯಂಬುಲೆನ್ಸ್‌ನ ಸುಗಮ ಸಂಚಾರಕ್ಕೆ ಅಡಚಣೆ ಯಾಗುವ ರೀತಿಯಲ್ಲಿ ಚರಣ್ ತಾನು ಚಲಾಯಿಸುತ್ತಿದ್ದ ಕಾರನ್ನು ಅಡ್ಡಾದಿಡ್ಡಿ ಚಲಾಯಿಸಿದ್ದ.

ಇದನ್ನು ಆ್ಯಂಬುಲೆನ್ಸ್‌ನಲ್ಲಿದ್ದವರು ವೀಡಿಯೋ ಸೆರೆ ಹಿಡಿದು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿದ್ದರು. ವೀಡಿಯೋ ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿತ್ತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು