ಬೆಳ್ತಂಗಡಿ : ಅಕ್ರಮವಾಗಿ ಜಿಂಕೆ ಚರ್ಮವನ್ನು ಸಾಗಿಸುತುತ್ತಿದ್ದ ಹನುಮಂತ (೩೫) ಎಂಬಾತನನ್ನು ಪುತ್ತೂರು ವಿಶೇಷ ಪೊಲೀಸ್ ಅರಣ್ಯ ದಳದ ಪಿಎಸ್ಐ ಜಾನಕಿಯವರ ತಂಡ, ಧರ್ಮಸ್ಥಳ ಬಸ್ ನಿಲ್ದಾಣದಲ್ಲಿ ಬಂಧಿಸಿದ್ದಾರೆ. ಈತ ಬೆಳಗಾವಿಯಿಂದ ಜಿಂಕೆ ಚರ್ಮವನ್ನು ಸಾಗಿಸುತ್ತಿದ್ದ ಎಂಬುದು ತಿಳಿದು ಬಂದಿದೆ.
ಆತನಿ0ದ ಒಂದು ಮೊಬೈಲ್ ಫೋನ್, ಜಿಂಕೆ ಚರ್ಮವನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಯನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.