News Karnataka Kannada
Friday, May 03 2024
ಮಂಗಳೂರು

ಅಕ್ರಮ ಟೋಲ್ ಗೇಟ್ ತೆರವಿಗಾಗಿ ಪಾದಯಾತ್ರೆ ; CITU ಸಂಪೂರ್ಣ ಬೆಂಬಲ

Latest News
Photo Credit :
ಸುರತ್ಕಲ್ ಅಕ್ರಮ ಟೋಲ್ ಗೇಟ್ ತೆರವಿಗಾಗಿ ಒತ್ತಾಯಿಸಿ ಮಾರ್ಚ್ 15ರಂದು ಹೆಜಮಾಡಿ ಟೋಲ್ ಗೇಟ್ ನಿಂದ ಸುರತ್ಕಲ್ ವರೆಗೆ ನಡೆಯುವ ಬ್ರಹತ್ ಪಾದಯಾತ್ರೆಗೆ ಕೇಂದ್ರ ಕಾರ್ಮಿಕ ಸಂಘಟನೆಯಾದ ಸೆಂಟರ್ ಆಪ್ ಇಂಡಿಯನ್ ಟ್ರೇಡ್ ಯೂನಿಯನ್ಸ್(CITU) ದ.ಕ.ಜಿಲ್ಲಾ ಸಮಿತಿಯು ಸಂಪೂರ್ಣ ಬೆಂಬಲವನ್ನು ವ್ಯಕ್ತಪಡಿಸಿದೆ.
ತಾತ್ಕಾಲಿಕ ನೆಲೆಯಲ್ಲಿ ಪ್ರಾರಂಭಗೊಂಡ ಸುರತ್ಕಲ್ ಟೋಲ್ ಗೇಟ್ ಕಳೆದ 6 ವರ್ಷಗಳಿಂದಲೂ ಅಕ್ರಮವಾಗಿ  ಜನತೆಯನ್ನು ಸುಲಿಗೆ ಮಾಡುತ್ತಿದೆ.ಈ ಬಗ್ಗೆ ಜನಪ್ರತಿನಿಧಿಗಳು, ಜಿಲ್ಲಾಧಿಕಾರಿಗಳು,ಹೆದ್ದಾರಿ ಪ್ರಾಧಿಕಾರಗಳು ಕೂಡಲೇ ತೆರವುಗೊಳಿಸ ಲಾಗುವುದೆಂದು ಭರವಸೆ ನೀಡಿದ್ದರೂ ಇಂದಿನವರೆಗೂ ಈ ಬಗ್ಗೆ ಎಳ್ಳಷ್ಟೂ ಗಮನ ಹರಿಸದೆ ಇರುವುದು ಬೇಜವಾಬ್ದಾರಿಯ ಪರಮಾವಧಿಯಾಗಿದೆ.
ಮಾತ್ರವಲ್ಲದೆ ಸ್ಥಳೀಯ ಜನತೆ ಕಳೆದ 6 ವರ್ಷಗಳಿಂದಲೂ ನಿರಂತರವಾಗಿ ಹೋರಾಟ ನಡೆಸುತ್ತಿದ್ದರೂ ಜನತೆಯ ಸಂಕಷ್ಟವನ್ನು ಕೇಳುವ ವ್ಯವಧಾನ ಸ್ಥಳೀಯ ಸಂಸದರಿಗೆ,ಶಾಸಕರಿಗೆ ಇಲ್ಲವಾಗಿದೆ.ಟೋಲ್ ಗೇಟ್ ಹೆಸರಿನಲ್ಲಿ ದಿನವೊಂದಕ್ಕೆ ಲಕ್ಷಾಂತರ ಹಣವನ್ನು ಅಕ್ರಮವಾಗಿ ಜನಸಾಮಾನ್ಯರಿಂದ ಹಗಲು ದರೋಡೆ ನಡೆಸುವುದು ಅಕ್ಷಮ್ಯ ಅಪರಾಧವಾಗಿದೆ ಎಂದು CITU ಕಟುವಾಗಿ ಟೀಕಿಸಿದೆ.
ಇಂತಹ ಅಕ್ರಮಗಳ ವಿರುದ್ಧ ಅವಿಭಜಿತ ದ.ಕ.ಜಿಲ್ಲೆಗಳ  60ಕ್ಕೂ ಮಿಕ್ಕಿದ ಸಂಘಟನೆಗಳು ಪಕ್ಷಭೇಧ ಮರೆತು ಈ ನ್ಯಾಯಯುತ ಹೋರಾಟದಲ್ಲಿ ಭಾಗವಹಿಸುತ್ತಿದ್ದು,ವಿವಿಧ ವಿಭಾಗದ ಕಾರ್ಮಿಕರೂ  ಕೂಡ ಸ್ವಯಂಸ್ಪೂರ್ತಿಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು CITU ದ.ಕ.ಜಿಲ್ಲಾಧ್ಯಕ್ಷರಾದ ಜೆ.ಬಾಲಕ್ರಷ್ಣ ಶೆಟ್ಟಿ,ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ರವರು ಪತ್ರಿಕಾ ಹೇಳಿಕೆಯೊಂದರಲ್ಲಿ ತಿಳಿಸಿದ್ದಾರೆ.
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
15229
Jaya Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು