Categories: ಮಂಗಳೂರು

ಅಕ್ರಮ ದನ ಸಾಗಾಟ ಮಾಡುತ್ತಿದ್ದವರ ಮೇಲೆ ಅಪರಿಚಿತರಿಂದ ಹಲ್ಲೆ

ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಅಂಜನೊಟ್ಟು ಎಂಬಲ್ಲಿ ಯಾವುದೇ ದಾಖಲೆಗಳಿಲ್ಲದೆ ಅಕ್ರಮವಾಗಿ ದನ ಸಾಗಾಟ ಮಾಡುತ್ತಿದ್ದ ಮೂಡುಗರೆ ತಾಲೂಕಿನ ಬಸವರಾಜ್ ಹಾಗೂ ಇತರ ೬ ಮಂದಿಯ ಮೇಲೆ ಬೆಳ್ತಂಗಡಿ ಪೋಲಿಸರು ಪ್ರಕರಣ ದಾಖಲಾಗಿದೆ. ಅದೇ ರೀತಿ ದನ ಸಾಗಾಟ ಮಾಡುತ್ತಿದ್ದವರ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಿರುವ ಹಿನ್ನಲೆಯಲ್ಲಿ ಅಪರಿಚಿತ ತಂಡದ ಮೇಲೆಯೂ ಬೆಳ್ತಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸೂಕ್ತವಾದ ದಾಖಲೆಗಳಿಲ್ಲದೆ ಟಾಟಾ ಎ.ಸಿ ವಾಹನದಲ್ಲಿ ಸುಮಾರು ರೂ.೧೮,೫೦೦ ಮೌಲ್ಯದ ಎರಡು ದನಗಳು ಮತ್ತು ಒಂದು ಕರುವನ್ನು ಮಾಂಸ ಮಾಡಲು ಕಡಿರುದ್ಯಾವರ ಗ್ರಾಮದ ಅಂಜನಬೆಟ್ಟ ಎಂಬಲ್ಲಿ ಸಾಗಾಟ ಮಾಡುತ್ತಿರುವುದನ್ನು ಪೊಲೀಸರು ಪತ್ತೆ ಹಚ್ಚಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಬಸವರಾಜ್, ಅವಿನಾಶ್, ಅಷ್ಪರಾಜ್, ಎಸ್. ಹರೀಶ್, ಬಿ.ಎಸ್.ಹರೀಶ್, ಶೀನ ಪೂಜಾರಿ, ಇಸ್ಮಾಯಿಲ್ ಎಂಬವರ ಮೇಲೆ ಬೆಳ್ತಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿಗಳಿಂದ ಮಾರುತಿ ೮೦೦ ಕಾರು ಹಾಗೂ ದನಗಳನ್ನು ಸಾಗಾಟ ಮಾಡುತ್ತಿದ್ದ ವಾಹನವನ್ನು ಹಾಗೂ ಎರಡು ದನಗಳನ್ನು ಹಾಗೂ ಒಂದು ಕರುವನ್ನು ವಶಕ್ಕೆ ಪಡೆದುಕೊಂಡಿದ್ದು ಪ್ರಕರಣ ದಾಖಲಿಸಿದ್ದಾರೆ.

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂಡಿಗೆರೆ ತಾಲೂಕಿನ ಎಸ್ಗಲ್ ಸುಶಾಂತ್ ನಗರ ನಿವಾಸಿ ಜಿ ಎಸ್ ಹರೀಶ್ ನೀಡಿದ ದೂರಿನಂತೆ ರಾತ್ರಿ ವೇಳೆ ತನ್ನ ಮನೆಗೆ ಹೈನುಗಾರಿಕೆಗೆ ದನಗಳ ಅಗತ್ಯತೆ ಇದ್ದುದರಿಂದ ಶೀನಪ್ಪ ಪೂಜಾರಿ ಎಂಬವರ ಮನೆಯಿಂದ ವ್ಯಾಪಾರ ಮಾಡಿ ೨ ಹಸು ಹಾಗೂ ಒಂದು ಕರುವನ್ನು ತುಂಬಿಸಿಕೊಂಡು ಹೋಗುತ್ತಿದ್ದಾಗ ಕಡಿರುದ್ಯಾವರ ಗ್ರಾಮದ ಅಂಜನಬೆಟ್ಟು ಎಂಬಲ್ಲಿ ೬ ರಿಂದ ೭ ಜನರಿದ್ದ ಅಪರಿಚಿತರು ವಾಹನವನ್ನು ಅಡ್ಡಗಟ್ಟಿ ಅವ್ಯಾಚ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿರುವುದಾಗಿ ಬೆಳ್ತಂಗಡಿ ಪೋಲಿಸರಿಗೆ ದೂರು ನೀಡಿದ್ದಾರೆ. ದೂರಿನ ಹಿನ್ನಲೆಯಲ್ಲಿ ಎರಡು ತಂಡಗಳ ಮೇಲೂ ಬೆಳ್ತಂಗಡಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Sneha Gowda

Recent Posts

ಮಕ್ಕಳಿಗೆ ಆಸ್ತಿ ಮಾಡುವುದಕ್ಕಿಂತ ಸಂಸ್ಕಾರ ಕಲಿಸಿ : ರವಿ ಶಾಸ್ತ್ರಿ

ಮಕ್ಕಳಿಗೆ ಆಸ್ತಿ ಮಾಡಿ ಇರಿಸುವುದರ ಬದಲು ಮಕ್ಕಳನ್ನು ವಿದ್ಯಾವಂತರನ್ನಾಗಿ ಸಂಸ್ಕಾರವಂತರನ್ನಾಗಿ ಮಾಡಿದರೆ ಅದುವೇ ದೊಡ್ಡ ಆಸ್ತಿ ಎಂದು ಶ್ರೀ ಕೃಷ್ಣ…

15 mins ago

ರೊನಿ ಅರುಣ್ ಬರೆದ ಲೇಖನಗಳ ಸಂಗ್ರಹ ʻರಿಕ್ಷಾ ಡೈರಿʼ ಲೋಕಾರ್ಪಣೆ

ಮಾಂಡ್ ಸೊಭಾಣ್ ಪ್ರಕಾಶನದ 22 ನೇ ಪುಸ್ತಕ ರೊನಿ ಅರುಣ್ ಬರೆದ ಲೇಖನಗಳ ಸಂಗ್ರಹ ʻರಿಕ್ಷಾ ಡೈರಿʼ ಉಲ್ಲಾಳ ಸೋಮೇಶ್ವರದಲ್ಲಿರುವ…

19 mins ago

ʼಮೋದಿ ಸರ್ಕಾರವನ್ನು ಸೋಲಿಸದಿದ್ದರೆ ಕರಾಳ ದಿನಗಳನ್ನ ಎದುರಿಸಬೇಕಾಗುತ್ತದೆʼ

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮೋದಿ ಸರ್ಕಾರವನ್ನು ಸೋಲಿಸದಿದ್ದರೆ ಮುಂದಿನ ದಿನಗಳಲ್ಲಿ ದೇಶವು ಕರಾಳ ದಿನಗಳನ್ನು ನೋಡಬೇಕಾಗಬಹುದು ಎಂದು ಶಿವಸೇನಾ…

25 mins ago

ವಕೀಲ ಬಾಬಶೆಟ್ಟಿ ಹತ್ಯೆಗೆ 5 ಲಕ್ಷ ಸುಪಾರಿ: ಪ್ರಮುಖ ಆರೋಪಿ ಬಂಧನ

ಐದು ಲಕ್ಷ ರೂಪಾಯಿಗೆ ಸುಪಾರಿ ಕೊಟ್ಟು, ವಕೀಲನ ಹತ್ಯೆಗೆ ಸಂಚು ರೂಪಿಸಿದ್ದ ಪ್ರಮುಖ ಆರೋಪಿಯನ್ನು ಬಂಧಿಸುವಲ್ಲಿ ಬೀದರ್‌ ಜಿಲ್ಲಾ ಪೊಲೀಸರು…

37 mins ago

ದೇಶಾದ್ಯಂತ 24 ಗಂಟೆ ವಿದ್ಯುತ್‌ ಪೂರೈಕೆ ಸೇರಿ 10 ಗ್ಯಾರಂಟಿ ಘೋಷಿಸಿದ ಕೇಜ್ರಿವಾಲ್

2024ರ ಲೋಕಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಗೆದ್ದರೆ ಹತ್ತು ಗ್ಯಾರಂಟಿಗಳನ್ನು ಜಾರಿಗೊಳಿಸಲಾಗುವುದು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌…

43 mins ago

ಬೀದರ್‌: ಬಿಸಿ ದೋಸೆಯಂತೆ ಮಾರಾಟವಾಗುತ್ತಿದೆ ಎಸಿ, ಕೂಲರ್‌

ಬಿಸಿಲು ಹಾಗೂ ಅದರ ಝಳದಿಂದ ಜನ ಒಂದೆಡೆ ತೀವ್ರ ಅನಾರೋಗ್ಯದ ಸಮಸ್ಯೆ ಎದುರಿಸುತ್ತಿದ್ದರೆ, ಏರ್‌ ಕಂಡಿಷನರ್‌ (ಎಸಿ), ಏರ್‌ ಕೂಲರ್‌ಗಳ…

58 mins ago