News Karnataka Kannada
Monday, April 29 2024
ಮಂಗಳೂರು

ಅಖಿಲ ಭಾರತ ಮುಷ್ಕರದ ಅಂಗವಾಗಿ ಕಾರ್ಮಿಕರ ಬ್ರಹತ್ ಪ್ರತಿಭಟನಾ ಪ್ರದರ್ಶನ

Manglore
Photo Credit :

ಮಂಗಳೂರು : ಕಾರ್ಮಿಕ ವರ್ಗದ ಹಲವಾರು ಬೇಡಿಕೆಗಳನ್ನು ಮುಂದಿಟ್ಟು ಕೇಂದ್ರ ಕಾರ್ಮಿಕ ಸಂಘಟನೆಗಳು ಕರೆ ನೀಡಿದ್ದ ಅಖಿಲ ಭಾರತ ಮಹಾಮುಷ್ಕರದ ಅಂಗವಾಗಿ ಇಂದು(29-03-2022) ಮಂಗಳೂರಿನಲ್ಲಿ ಜರುಗಿದ ಕಾರ್ಮಿಕರ ಮೆರವಣಿಗೆ ಹಾಗೂ ಬ್ರಹತ್ ಪ್ರತಿಭಟನಾ ಪ್ರದರ್ಶನ ನಿರೀಕ್ಷೆಗೂ ಮೀರಿ ಕಾರ್ಮಿಕರು ಭಾಗವಹಿಸುವುದರೊಂದಿಗೆ ಅತ್ಯಂತ ಯಶಸ್ವಿಯಾಗಿ ನಡೆಯಿತು.

ವಿಭಾಗದ ಕಾರ್ಮಿಕರು ಡಾ.ಬಿ.ಆರ್.ಅಂಬೇಡ್ಕರ್ ವ್ರತ್ತದಿಂದ ಮೆರವಣಿಗೆಯಲ್ಲಿ ಹೊರಟು ಕೇಂದ್ರ ಸರಕಾರದ ರೈತ ಕಾರ್ಮಿಕ ಜನವಿರೋಧಿ ನೀತಿಗಳ ವಿರುದ್ಧ ಆಕ್ರೋಶಭರಿತರಾಗಿ ಘೋಷಣೆಗಳನ್ನು ಕೂಗುತ್ತಾ ಸಾಗಿದರು.

ನಗರದ ಕ್ಲಾಕ್ ಟವರ್ ಬಳಿಯಲ್ಲಿ ಸೇರಿದ್ದ ಕಾರ್ಮಿಕರ ಬ್ರಹತ್ ಪ್ರತಿಭಟನಾ ಪ್ರದರ್ಶನವನ್ನು ಉದ್ದೇಶಿಸಿ ಮಾತನಾಡಿದ CITU ದ.ಕ.ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ರವರು, ಸುಳ್ಳು ಆಶ್ವಾಸನೆಗಳನ್ನು ನೀಡಿ ಅಧಿಕಾರಕ್ಕೇರಿದ ಕೇಂದ್ರದ ನರೇಂದ್ರ ಮೋದಿ ಸರಕಾರವು ಕಾರ್ಪೋರೇಟ್ ಕಂಪೆನಿಗಳ ಹಿತ ಕಾಯುತ್ತಾ ದೇಶದ ಸಂಪತ್ತನ್ನೇ ಮಾರಲು ಹೊರಟಿದೆ.

ಕಾರ್ಮಿಕರ ಸಂಘಟಿತ ಹೋರಾಟದ ಫಲವಾಗಿ ರೂಪುಗೊಂಡಿದ್ದ ಕಾರ್ಮಿಕ ಕಾನೂನುಗಳನ್ನು ತಿದ್ದುಪಡಿ ಮಾಡಿ, ಕಾರ್ಪೋರೇಟ್ ಪರವಾದ 4 ಸಂಹಿತೆಗಳನ್ನು ಮಾಡುವ ಮೂಲಕ ಮತ್ತೆ ಕಾರ್ಮಿಕರನ್ನು ಜೀತದಾಳುಗಳನ್ನಾಗಿ ದುಡಿಸುವ ಹುನ್ನಾರ ಅಡಗಿದೆ.ಬೆಲೆಯೇರಿಕೆಯಿಂದ ಕಂಗೆಟ್ಟ ಕಾರ್ಮಿಕರು ಸಾಮಾಜಿಕ ಭದ್ರತೆಯಿಲ್ಲದೆ, ಕನಿಷ್ಟ ಕೂಲಿಯಿಲ್ಲದೆ ತೀರಾ ಶೋಚನೀಯ ಬದುಕು ಸಾಗಿಸುವಂತಾಗಿದೆ.

ಅಂದು ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿ,ತ್ಯಾಗ ಬಲಿದಾನದ ಪರಂಪರೆ ಹೊಂದಿದ ಕಾರ್ಮಿಕ ವರ್ಗ ಇಂದು ಮತ್ತೆ ದೇಶದ ರಕ್ಷಣೆಗಾಗಿ ಸಂಘಟಿತ ಹೋರಾಟ ನಡೆಸುವ ಮೂಲಕ ಜನತೆಯ ಬದುಕನ್ನು ಉಳಿಸ ಬೇಕಾಗಿದೆ ಎಂದು ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು