Categories: ಮಂಗಳೂರು

ಅಥೆನಾ ಆರೋಗ್ಯ ಸಂಸ್ಥೆಯಲ್ಲಿ ವೇಬಿನಾರ್ ಆಯೋಜನೆ

ಮಂಗಳೂರು : ನಗರದ  ಅಥೇನಾ ಆರೋಗ್ಯ ವಿಜ್ಞಾನ ಸಂಸ್ಥೆಯ ಮ್ಯಾನೇಜ್ಮೆಂಟ್ ಸಂಸ್ಥೆ ಯಲ್ಲಿ   ಇಂದು ಬೆಳಿಗ್ಗೆ    “ಗುಣಾತ್ಮಕ ಸಂಶೋಧನೆಯ ನೋಟ” ಕುರಿತು ವೆಬಿನಾರ್ ಅನ್ನು ಆಯೋಜಿಸಿದ್ದರು .

ದೀಪ ಬೆಳಗಿಸುವ ಮೂಲಕ ವೆಬಿನಾರನ್ನು ಉದ್ಘಾಟಿಸಿದರು . ಕಾಲೇಜಿನ  ಉಪಪ್ರಾಂಶುಪಾಲೆ ಭಗಿನಿ ಐಲೀನ್ ಮಥಾಯಿಸ್ ನರ್ಸಿಂಗ್  ವಿಷಯದ ಮಹತ್ವವನ್ನು ವಿವರಿಸಿದರು. ನಂತರ ಅಧ್ಯಕ್ಷೀಯ ಭಾಷಣವನ್ನು ಅಥೇನಾ ಆರೋಗ್ಯ ವಿಜ್ಞಾನ ಸಂಸ್ಥೆಯ ಅಧ್ಯಕ್ಷರು ಶ್ರೀ. ಆರ್.ಎಸ್.  ಶೆಟ್ಟಿಯನ್ ಅವರು ನಡೆಸಿಕೊಟ್ಟರು .

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ  ಮಣಿಪಾಲ್ ಕಾಲೇಜ್ ಆಫ್ ನರ್ಸಿಂಗ್  ಡೀನ್,  ಡಾ. ಜುಡಿತ್ ನೊರೊನ್ಹಾ ಅವರು ಗುಣಾತ್ಮಕ ಸಂಶೋಧನೆಯ ಬಗ್ಗೆ ವಿವರವಾಗಿ ವಿದ್ಯಾರ್ಥಿಗಳಿಗೆ  ತಿಳಿಯಪಡಿಸಿದರು.
ಮಣಿಪಾಲ್ ಕಾಲೇಜ್ ಆಫ್ ನರ್ಸಿಂಗ್ ನ ಉಪನ್ಯಾಸಕರಾದ  ಅನಿಲ್ ರಾಜ್ ಅವರು ದತ್ತಾಂಶ ಸಂಗ್ರಹ ವಿಧಾನಗಳು ಮತ್ತು ವಿಶ್ಲೇಷಣೆಯನ್ನು ಹೇಗೆ ಮಾಡಬಹುದು ಎಂಬುದಾಗಿ ತಿಳಿಸಿದರು ಹಾಗೂ ಭಾಗವಹಿಸಿದವರ ಪ್ರಶ್ನೆಗಳಿಗೆ ಉತ್ತರಿಸಿದರು.
ಕಾರ್ಯಕ್ರಮದ ಕೊನೆಯಲ್ಲಿ ಸಂವಾದ ನಡೆಸಲಾಯಿತು. ಕಾಲೇಜಿನ ಪ್ರಾಂಶುಪಾಲೆ ಭಗಿನಿ ದೀಪಾ ಪೀಟರ್ ಗಣ್ಯರನ್ನು ಮತ್ತು ಭಾಗವಹಿಸಿದವರನ್ನು ಸ್ವಾಗತಿಸಿದರು.ಶ್ರೀಮತಿ ಶರ‍್ಲೆಟ್ ಡಿಸೋಜ ಸಂಘಟನಾ ಕಾರ್ಯದರ್ಶಿ  ವಂದಿಸಿದರು.  ಶ್ರೀಮತಿ ಅನಕ್ಲಿಟಾ ಡೊರಿನಾ ಮಿಸ್ಕ್ವಿತ್ ಕಾರ್ಯಕ್ರಮವನ್ನು ನಡೆಸಿಕೊಟ್ಟರು.  ವಿದ್ಯಾರ್ಥಿನಿಯರು ಹಾಗೂ  ಉಪನ್ಯಾಸಕರು   ವೇಬಿನಾರ್ ನಲ್ಲಿ  ಭಾಗವಹಿಸಿದ್ದರು.
Raksha Deshpande

Recent Posts

ರಿಚರ್ಡ್‌ ಹ್ಯಾನ್ಸೆನ್‌ಗೆ ಸೆಲ್ಕೋದ ಪ್ರತಿಷ್ಠಿತ ʼಸೂರ್ಯಮಿತ್ರʼ ಪ್ರಶಸ್ತಿ

ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್‌ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂ‍ಸ್ಥೆಗಳ…

4 hours ago

ಜಿಯೋ ಬಂಪರ್‌ ಆಫರ್‌ : 15 ಒಟಿಟಿ ಆ್ಯಪ್ಲಿಕೇಷನ್‌ ಜೊತೆ ಅನ್‌ಲಿಮಿಟೆಡ್ ಡೇಟಾ ಪ್ಲಾನ್

ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್‌ಫ್ಲಿಕ್ಸ್‌ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…

4 hours ago

ಕಾರಿನಲ್ಲಿ ಆಕಸ್ಮಿಕ ಬೆಂಕಿ : ವ್ಯಕ್ತಿ ಸಜೀವ ದಹನ

ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…

4 hours ago

ವಿಧಾನಪರಿಷತ್ ಚುನಾವಣೆ : ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಬಿಜೆಪಿ

ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…

5 hours ago

ಹಾಡಹಗಲೇ ಚಾಕುವಿನಿಂದ ಇರಿದು ಯುವಕನ ಭೀಕರ ಹತ್ಯೆ

ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ‌ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…

5 hours ago

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಬಿತ್ತು ಧರ್ಮದೇಟು

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್‌ ನಿಲ್ದಾಣದಲ್ಲಿ ಇಂದು ಸಂಭವಿಸಿದೆ

5 hours ago