ಬೆಳ್ತಂಗಡಿ: ತಾಲೂಕಿನ ಸಮಗ್ರ ಅಭಿವೃದ್ಧಿಯ ಧ್ಯೇಯದೊಂದಿಗೆ ಜನತೆಯ ಬೇಡಿಕೆಗಳನ್ನು ಪ್ರಾಮಾಣಿಕವಾಗಿ ಈಡೇರಿಸುವ ಗುರಿಯನ್ನು ಹೊಂದಲಾಗಿದೆ ಎಂದು ಶಾಸಕ ಹರೀಶ್ ಪೂಂಜ ಹೇಳಿದರು.
ಅವರು ಭಾನುವಾರ ಉಜಿರೆಯ ಸಂತ ಅಂತೋಣಿ ಚರ್ಚ್ ನ ಅನುಗ್ರಹ ಶಾಲೆಯ ವಠಾರದಲ್ಲಿ ಒಳಚರಂಡಿ ವ್ಯವಸ್ಥೆಯ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು.
ಮುಂದಿನ ಒಂದು ತಿಂಗಳಲ್ಲಿ ಶಾಲೆಯ ಆಟದ ಮೈದಾನಕ್ಕೆ ಇಂಟರ್ ಲಾಕ್ ಅಳವಡಿಸುವ ಜತೆ ಕಾಮಗಾರಿಗಳನ್ನು ಶೀಘ್ರ ಮುಗಿಸಲಾಗುವುದು ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ಚರ್ಚ್ ನ ಧರ್ಮಗುರು ಫಾ. ಜೇಮ್ಸ್ ಡಿಸೋಜಾ ಮಾತನಾಡಿ ತಾಲೂಕಿನ ಅಭಿವೃದ್ಧಿಯ ನಿಟ್ಟಿನಲ್ಲಿ ಶಾಸಕರು ಉತ್ತಮವಾದ ಕೆಲಸಗಳನ್ನು ಮಾಡುತ್ತಿರುವುದು ಶ್ಲಾಘನೀಯ ಎಂದು ಹೇಳಿದರು.
ಉಜಿರೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪುಷ್ಪಾವತಿ ಆರ್.ಶೆಟ್ಟಿ, ಉಪಾಧ್ಯಕ್ಷ ರವಿಕುಮಾರ್ ಬರೆಮೇಲು, ಸದಸ್ಯರಾದ ಪ್ರೇಮ್ ವೇಗಸ್,ನಾಗವೇಣಿ, ಜಾನೆಟ್ ರೋಡ್ರಿಗಸ್, ತಾಲೂಕು ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಜಯಂತ ಗೌಡ ಗುರಿಪಳ್ಳ,ಅನುಗ್ರಹ ಪದವಿಪೂರ್ವ ಕಾಲೇಜಿನ ಪ್ರಿನ್ಸಿಪಾಲ್ ಫಾ.ಉದಯ ಫೆರ್ನಾಂಡಿಸ್,ಚರ್ಚ್ ಪಾಲನಾ ಮಂಡಳಿಯ ಉಪಾಧ್ಯಕ್ಷ ಆಂಟನಿ ಫೆರ್ನಾಂಡಿಸ್, ಕಾರ್ಯದರ್ಶಿ ನಿತಿನ್ ಮೋರಾಸ್ ಉಪಸ್ಥಿತರಿದ್ದರು.
ಸ್ಟ್ಯಾನ್ಲಿ ಪಿಂಟೋ ಕಾರ್ಯಕ್ರಮ ನಿರೂಪಿಸಿದರು.