ಮಂಗಳೂರು: ನಗರದ ಬಲ್ಲಾಳ್ ಬಾಗ್ ಬಳಿ ನಡೆದಿದ್ದ ಕಾರು ಚಾಲಕನ ಬೇಜವಾಬ್ದಾರಿ ಚಾಲನೆಯಿಂದಾಗಿ ಮಹಿಳೆ ಸಾವಿಗೆ ಕಾರಣನಾಗಿದ್ದ ಬಿಎಂಡಬ್ಲ್ಯು ಕಾರು ಚಾಲಕ ಶರವಣ್ ಕುಮಾರ್ ಎಂಬಾತನ ವಿರುದ್ಧ ಇದೀಗ ಕೊಲೆ ಪ್ರಕರಣ ದಾಖಲಾಗಿ ತನಿಖೆ ಹಂತದಲ್ಲಿದೆ ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ ತಿಳಿಸಿದ್ದಾರೆ .
ಸುದ್ದಿಗಾರರಿಗೆ ಮಾಹಿತಿ ನೀಡಿದ ಅವರು ಏಪ್ರಿಲ್ 9ರಂದು ಈ ದುರಂತ ಘಟನೆ ನಡೆದಿದೆ .ಸಾವಿಗೆ ಕಾರಣನಾಗಿದ್ದ ಆರೋಪಿ ವಿರುದ್ಧ ಮೊದಲು ಐಪಿಸಿ 304ಅಂದರೆ ಪ್ರಾಣ ಹಾನಿಯಾಗುವ ಬಗ್ಗೆ ಜ್ಞಾನ ಇದ್ದರೂ ಈ ಕೃತ್ಯ ಮುಂದಾಗುವುದು ಅದರ ಮುಂದುವರಿದ ಭಾಗವಾಗಿ ಐಪಿಸಿ 308ಅಂದರೆ ಕೊಲೆ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಆರೋಪಿ ಶ್ರವಣ್ ಕುಮಾರ್ 8ದಿನ ನ್ಯಾಯಾಂಗ ಬಂಧನದಲ್ಲಿದ್ದನು.
ಚಾಲನೆ ವೇಳೆ ಆರೋಪಿ ಡ್ರಗ್ಸ್ ಮದ್ಯಪಾನ ಮಾಡಿರುವ ಬಗ್ಗೆ ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ತಿಳಿಸಿದರು .ಪ್ರೀತಿ ಮನೋಜ್ ಅವರು ತಮ್ಮ ಅಂಗಾಂಗ ದಾನ ಮಾಡುವ ಮೂಲಕ ಸಾವಿನಲ್ಲೂ ಆದರ್ಶ ಮೆರೆದಿದ್ದಾರೆ ಎಂದು ಕಮಿಷನರ್ ಶ್ಲಾಘಿಸಿದರು.