Categories: ಮಂಗಳೂರು

ಅಪ್ರಾಪ್ತೆಯ ಸಾಮೂಹಿಕ ಅತ್ಯಾಚಾರ,ನಾಲ್ವರು ಕಾಮುಕರು ಪೊಲೀಸ್ ವಶಕ್ಕೆ

ಬಂಟ್ವಾಳ: ಇಲ್ಲಿಯ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಅಮ್ಟಾಡಿ ಎಂಬಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಐವರ ತಂಡ  ಸಾಮೂಹಿಕ ಅತ್ಯಾಚಾರ ಎಸಗಿರುವ ಕೃತ್ಯ ನಡೆದಿದ್ದು,ಈ ಸಂಬಂಧ ಪೊಲೀಸರು ನಾಲ್ವರು ಆರೋಪಿಗಳ ಎಡೆಮುರಿ ಕಟ್ಟಿದ್ದಾರೆ.

ಶುಕ್ರವಾರ ಬೆಳಿಗ್ಗೆ 7 ಗಂಟೆಯ ವೇಳೆಗೆ ಬಿಳಿ ಕಾರಿನಲ್ಲಿ ಬಂದ ಪರಿಚಿತ ಆರೋಪಿ ಶಾಲೆಗೆ ತೆರಳುತ್ತಿದ್ದ ಬಾಲಕಿಯನ್ನು  ಕಾರಿನಲ್ಲಿ  ಹತ್ತಿಸಿಕೊಂಡು ಬಳಿಕ ಅಮ್ಟಾಡಿಯ ನಿರ್ಜನ ಪ್ರದೇಶವೊಂದಕ್ಕೆ ಕರೆದೊಯ್ದು ಜೊತೆಗಿದ್ದವರೊಂದಿಗೆ ಸೇರಿ ಈ ಕೃತ್ಯ ಎಸಗಿದ್ದಾಗಿ ಬಾಲಕಿ ದೂರು ನೀಡಿದ್ದಾಳೆ,  ಅಸ್ವಸ್ಥಳಾದ ಬಾಲಕಿ ಸದ್ಯ ಮಂಗಳೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.

ಬಾಲಕಿಯ ಹೇಳಿಕೆಯ ಆಧಾರದಲ್ಲಿ ಪ್ರಮುಖ ಆರೋಪಿ ಸಹಿತ ನಾಲ್ವರನ್ನು ಬಂಟ್ವಾಳ ನಗರ  ಪೊಲೀಸರ ವಿಶೇಷ ತಂಡ ಶನಿವಾರ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಗುರಿಪಡಿಸುತ್ತಿದೆ. ಆರೋಪಿಗಳು ಬಾಲಕಿಗೆ ಮತ್ತು ಬರುವ ಚಾಕಲೇಟ್ ನೀಡಿದ್ದು,ಕೃತ್ಯದ ಬಳಿಕ ಆಕೆಯನ್ನು ಬ್ರಹ್ಮರಕೂಟ್ಲುವಿನ ಟೋಲ್ ಗೇಟ್ ಬಳಿ ಬಿಟ್ಟು ಹೋಗಿರುವುದು ಅಲ್ಲಿನ ಸಿಸಿಟಿವಿ ಕ್ಯಾಮರಾದಲ್ಲಿ ದಾಖಲಾಗಿದೆ ಎನ್ನಲಾಗಿದೆ.

ಒಟ್ಟು ಐವರು ಆರೋಪಿಗಳು ಈ ಕೃತ್ಯದಲ್ಲಿ ಶಾಮೀಲಾಗಿದ್ದು,ಸದ್ಯ ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಪ್ರಕರಣದ ಕುರಿತು ಹಲವು ಸಂಶಯಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು ,ಪೋಕ್ಸೋ ಕಾಯ್ದೆಯಡಿ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು,ತನಿಖೆ ನಡೆಯುತ್ತಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಸೋನಾವಣೆ ತಿಳಿಸಿದ್ದಾರೆ.

Raksha Deshpande

Recent Posts

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

3 hours ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

4 hours ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

4 hours ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

4 hours ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

5 hours ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

5 hours ago