ಬೆಳ್ತಂಗಡಿ : ಪಂಚರಾಜ್ಯ ಚುನಾವಣೆಯಲ್ಲಿ ನಾಲ್ಕು ರಾಜ್ಯಗಳಲ್ಲಿ ಬಿಜೆಪಿ ಗೆಲುವನ್ನು ಕಂಡಿರುವುದು ಇದು ರಾಷ್ಟ್ರವಾದಕ್ಕೆ ಸಿಕ್ಕಿದ ಗೆಲುವು. ರಾಷ್ಟ್ರೀಯ ವಿಚಾರಧಾರೆಯನ್ನು ಇಟ್ಟುಕೊಂಡು ಬಿಜೆಪಿ ಮಾಡಿದ ಕೆಲಸ, ಪ್ರಧಾನಿ ನರೇಂದ್ರ ಮೋದಿಯವರ ಅಭಿವೃದ್ಧಿ ಕಾರ್ಯವನ್ನು ಮೆಚ್ಚಿ ಜನ ಭಾರತೀಯ ಜನತಾ ಪಾರ್ಟಿಗೆ ಗೆಲುವನ್ನು ಕೊಟ್ಟಿದ್ದಾರೆ. ಗೋವಾದಲ್ಲಿ ಮನೋಹರ್ ಪರಿಕ್ಕಾರ್ ಬಳಿಕ ಸಾವಂತ್ ಉತ್ತಮ ಕೆಲಸ ನಿರ್ವಹಿಸಿದ ಪರಿಣಾಮ ಗೋವಾದಲ್ಲಿ ಸ್ಪಷ್ಟ ಬಹುಮತ ಸಿಕ್ಕಿದೆ ಎಂದು ಶಾಸಕ ಹರೀಶ್ ಪೂಂಜ ಹೇಳಿದರು.
ಉತ್ತರಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ರವರ ಅಭಿವೃದ್ಧಿ ಮತ್ತು ಜನಪರ ಕಾಳಜಿಗೆ ಜನ ಎರಡನೇ ಬಾರಿ ಅಧಿಕಾರವನ್ನು ಕೊಟ್ಟಿದ್ದಾರೆ. ಮಣಿಪುರ ಅನೇಕ ಮಿತ್ರಪಕ್ಷಗಳನ್ನೊಳಗೊಂಡು ಆಡಳಿತ ನಡೆಸಿ ಅಭಿವೃದ್ಧಿ ಮಾಡಿದ ಫಲ ಈ ಬಾರಿ ಬಿಜೆಪಿಗೆ ಸ್ಪಷ್ಟ ಬಹುಮತ ನೀಡಿದೆ. ಉತ್ತರಾಖಂಡದಲ್ಲಿ ಮತ್ತೊಮ್ಮೆ ಬಿಜೆಪಿಗೆ ಅಧಿಕಾರವನ್ನು ಮತದಾರರು ನೀಡಿದ್ದಾರೆ. ಈ ಜಯ ರಾಷ್ಟ್ರದ ವಿಶ್ವ ನಾಯಕರಾದಂತಹ ನರೇಂದ್ರ ಮೋದಿಯವರ ಅಭಿವೃದ್ಧಿ ಮತ್ತು ಅವರ ಜನಪರ ನಾಯಕತ್ವಕ್ಕೆ ಸಿಕ್ಕಿದ ಗೆಲುವಾಗಿದೆ.