News Karnataka Kannada
Sunday, April 28 2024
ಮಂಗಳೂರು

ಅಮೈ ಮಹಾಲಿಂಗ ನಾಯ್ಕ ಅವರ ಮನೆಗೆ ಬೇಟಿ ನೀಡಿದ ನಳಿನ್ ಕುಮಾರ್ ಕಟೀಲ್

Nalin
Photo Credit :
ಬಂಟ್ವಾಳ : ತ್ರಿವಿಕ್ರಮನಂತೆ ಸುರಂಗವನ್ನು ಕೊರೆದು ನೀರನ್ನು ತರುವ ನಿಟ್ಟಿನಲ್ಲಿ ಭಗೀರಥ ಪ್ರಯತ್ನವನ್ನು ಮಾಡಿದವರು. ಕಲ್ಲುಗುಡ್ಡೆಯಂತಿರುವ ಪ್ರದೇಶದಲ್ಲಿ ಕೃಷಿಯನ್ನು ಮಾಡಬೇಕು. ತನಗೆ ಬಂದ ಆಸ್ತಿಯಲ್ಲಿ ಕೃಷಿಯ ಮೂಲಕ ಬದುಕನ್ನು ಹಸನು ಮಾಡಬೇಕೆಂದು ಸಾಧನೆಯನ್ನು ಮಾಡಿದ್ದಾರೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು.
ಅವರು ಶನಿವಾರ  ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆಯಾದ ಅಮೈ ಮಹಾಲಿಂಗ ನಾಯ್ಕ ಅವರ ಮನೆಗೆ ಬೇಟಿ ನೀಡಿ ಅವರನ್ನು ಸನ್ಮಾನಿಸಿ ಮಾತನಾಡಿದರು.
ತನ್ನ ತ್ಯಾಗ ಮತ್ತು ಶ್ರದ್ಧೆಯಿಂದ ಪರಿಶ್ರಮದಿಂದ ಮಾಡಿದ ಕಾರ್ಯಕ್ಕೆ ಭಗವಂತ ನೀರನ್ನು ಕೊಟ್ಟ. ಇಂತಹ ಸಾಧಕನನ್ನು ಗುರುತಿಸುವ ಕಾರ್ಯವನ್ನು ಈ ದೇಶದ ಪ್ರಧಾನ ಮಂತ್ರಿಗಳು ಮಾಡಿದ್ದಾರೆ. ಪ್ರದ್ಮಶ್ರೀ ಪ್ರಶಸ್ತಿಯನ್ನು ನೀಡುವ ಮೂಲಕ ಮಹಾಲಿಂಗ ನಾಯ್ಕರ ಪರಿಶ್ರಮ ದೇಶಕ್ಕೆ ಜಗತ್ತಿಗೆ ಪರಿಚಯವಾಗಿದೆ ಎಂದು ತಿಳಿಸಿದರು.
ಪುತ್ತೂರು ಶಾಸಕ ಸಂಜೀವ ಮಠಂದೂರು, ಬಿಜೆಪಿ ಜಿಲ್ಲಾ ಅಧ್ಯಕ್ಷ ಸುದರ್ಶನ ಮೂಡಬಿದ್ರೆ, ಪುತ್ತೂರು ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಕೃಷ್ಣ ಆಳ್ವ, ಹರಿಕೃಷ್ಣ ಬಂಟ್ವಾಳ, ದಯಾನಂದ ಉಜಿರೆಮಾರು, ಅರುಣ ವಿಟ್ಲ, ಮಾಧವ ಮಾವೆ, ರಾಜೇಶ್ ಕುಮಾರ್ ಬಾಳೆಕಲ್ಲು, ಯಶಸ್ವಿನಿ ಶಾಸ್ತ್ರಿ ಮತ್ತಿತರರು ಉಪಸ್ಥಿತರಿದ್ದರು.
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
153
Mounesh V

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು