News Karnataka Kannada
Tuesday, April 30 2024
ಮಂಗಳೂರು

ಅರಸಿನಮಕ್ಕಿ ಉದಯಶಂಕರ ಕೆ. ಇವರಿಗೆ ಈ ವರ್ಷದ “ಉಂಡೆಮನೆ” ಪ್ರಶಸ್ತಿ

New Project
Photo Credit :

ಬೆಳ್ತಂಗಡಿ : ವೃತ್ತಿಯಲ್ಲಿ ಬೆಳ್ತಂಗಡಿಯಲ್ಲಿ ಜೀವವಿಮಾ ಅಭಿವೃದ್ಧಿ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ, ಪ್ರವೃತ್ತಿಯಲ್ಲಿ ಸಮಾಜಸೇವಕನಾಗಿ ಕೆಲಸ ಮಾಡುತ್ತಿರುವ ಅರಸಿನಮಕ್ಕಿ ಸಮೀಪದ ಉದಯಶಂಕರ ಕೆ. ಇವರಿಗೆ ಈ ವರ್ಷದ “ಉಂಡೆಮನೆ” ಪ್ರಶಸ್ತಿಯನ್ನು ಘೋಷಿಸಲಾಗಿದೆ.

ಬಾಲ್ಯದಲ್ಲಿ ತಂದೆಯನ್ನು ಕಳಕೊಂಡರೂ ತಾಯಿಯ ರಕ್ಷಣೆ- ಮಾರ್ಗದರ್ಶನಗಳಲ್ಲಿ ಹತ್ತನೆಯ ತರಗತಿಯಲ್ಲಿರುವಾಗಲೇ ರಾ.ಸ್ವ.ಸಂಘದ ಸಂಪರ್ಕದಿಂದ ಸಮಾಜಸೇವೆಗಿಳಿದ ಇವರು ವಿವಿಧ ಧಾರ್ಮಿಕ, ಸಾಮಾಜಿಕ,ಶೈಕ್ಷಣಿಕ, ಸಾಂಸ್ಕೃತಿಕ ಸೇವಾಚಟುವಟಿಕೆಗಳಲ್ಲಿ ವೈಯಕ್ತಿಕವಾಗಿ ಹಾಗೂ ಜೇಸೀ,ರೋಟರಿ ಮುಂತಾದ ಸಂಘ ಸಂಸ್ಥೆಗಳೊಂದಿಗೆ ತನ್ನನ್ನು ಜೋಡಿಸಿಕೊಂಡು ಭಾಗಿಯಾಗುತ್ತಿದ್ದಾರೆ.

ಪರೋಪಕಾರದ ಮೂಲಕವೇ ವೈಯಕ್ತಿಕ ವರ್ಚಸ್ಸನ್ನು ಪಡಕೊಂಡ ಇವರು ಮೂಲ ಕಾರ್ಯಕರ್ತರಿಗೆ ಮಾದರಿಯಾಗಿದ್ದಾರೆ. ಶ್ರೀರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿಯವರ ಎಲ್ಲಾ ಸಮಾಜಮುಖೀ ಸೇವಾಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಇವರ ಸರ್ವ ಸೇವೆಗಳನ್ನು ಗುರುತಿಸಿ “ಉಂಡೆಮನೆ ಶಂಭು ಭಟ್ಟರ ಸವಿನೆನಪಿನ ಶಿಕ್ಷಣ ಪ್ರೋತ್ಸಾಹ ಯೋಜನೆ” ಅಂಗವಾಗಿರುವ (26 ನೆಯ ವರ್ಷ) ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದೆಂದು ಯೋಜನೆಯ ಸಂಚಾಲಕ ಉಂಡೆಮನೆ ವಿಶ್ವೇಶ್ವರ ಭಟ್ಟರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸ್ವಾಮೀಜಿಯವರು ಗೋಕರ್ಣ ಸಮೀಪದ ಅಶೋಕೆಯಲ್ಲಿರುವ ವಿಷ್ಣುಗುಪ್ತ ವಿಶ್ವವಿದ್ಯಾಪೀಠದಲ್ಲಿ ಬರುವ ತಿಂಗಳು ಈ ಪ್ರಶಸ್ತಿಯನ್ನು ಪ್ರದಾನ ಮಾಡಲಿರುವರೆಂದು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು