Categories: ಮಂಗಳೂರು

ಅರುಣ ಮಸಾಲಾ ಆ್ಯಪ್ ಬಿಡುಗಡೆಗೊಳಿಸಿದ ನಟ ಅರ್ಜುನ್ ಕಾಪಿಕಾಡ್

ಮಂಗಳೂರು: ನಗರದ ಪ್ರಸಿದ್ಧ ಮಸಾಲಾ ತಯಾರಿಕಾ ಕಂಪನಿ ಅರುಣ, ಹೊಸ ಯೋಜನೆಯನ್ನು ಕೈಗೊಂಡಿದೆ ಆ ಪ್ರಯುಕ್ತ ‘ಅರುಣ ಮಸಾಲ ಆ್ಯಪ್’ ತಯಾರಿಸಿದ್ದಾರೆ.
ಈ  ಆ್ಯಪ್ ನ್ನು ನಗರದ ಪಿಜ್ಜಾ ಮಾಲ್ ನಲ್ಲಿ ತುಳು ಚಿತ್ರ ನಟ ಅರ್ಜುನ್ ಕಾಪಿಕಾಡ್ ಬಿಡುಗಡೆಗೊಳಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು ತುಳುಭಾಷೆಗೆ ತುಳು ಚಲನಚಿತ್ರಕ್ಕೆ ಸಹಾಯ ಮಾಡಿದ ಅರುಣ ಸಂಸ್ಥೆಗೆ ಆಭಾರಿಯಾಗಿದ್ದೇನೆ ಎಂದರು.

ಅಬತರ ಚಲನಚಿತ್ರದ ನಟಿ ಗಾನ ಭಟ್‌ರವರು ಅರುಣಾ ಮಸಾಲಾ ಸಂಸ್ಥೆಗೆ ಶುಭ ಹಾರೈಸಿದರು.
ಅರುಣಾ ಮಸಾಲಾ ಸಂಸ್ಥೆಯ ಪಾಲುದಾರರಾದ ಅನಂತೇಶ್ ಪ್ರಭುರವರು “ಅಬತರ” ಚಲನ ಚಿತ್ರ ತಂಡ ತಮ್ಮನ್ನು ಗುರುತಿಸಿದೆ ಅದಕ್ಕಾಗಿ ಅಭಿನಂದನೆಗಳು, ಮುಂದಕ್ಕೂ ಇದೇ ರೀತಿ ಸಹಕಾರವಿರಲಿ ಎಂದು ಹೇಳಿದರು.

ಈ ಸಂದರ್ಭದಲ್ಲಿ ತುಳು ಚಿತ್ರ ನಟ ದೇವದಾಸ್ ಕಾಪಿಕಾಡ್, “ಅಬತರ ” ತುಳು ಚಿತ್ರದ ನಟಿ ಗಾನ ಭಟ್, ಅರುಣಾ ಮಸಾಲಾ ಸಂಸ್ಥೆಯ ಪಾಲುದಾರರಾದ ಅನಂತೇಶ್ ಪ್ರಭು ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ “ಅಬತರ” ತುಳು ಚಲನಚಿತ್ರದ ಆಡಿಯೋ ಬಿಡುಗಡೆ ಮಾಡಲಾಯಿತು. ತುಳು ಚಲನಚಿತ್ರ “ಅಬತರ”ದ ತಂಡವು ಉಭಯ ಜಿಲ್ಲೆ ಮತ್ತು ಹಲವು ಕಡೆ ತನ್ನ ಚಲನಚಿತ್ರಕ್ಕೆ ಪ್ರಚಾರ ಅಭಿಯಾನ ನಡೆಸುತ್ತಿದ್ದು, ಅಲ್ಲೆಲ್ಲ ಅರುಣಾ ಮಸಾಲಾ ಸಂಸ್ಥೆಯ ಆ್ಯಪ್‌ನ ಬಗ್ಗೆ ಸ್ಥಳೀಯರಿಗೆ ಮಾಹಿತಿ ನೀಡುತ್ತದೆ. ಅರುಣಾ ಮಸಾಲಾ ಸಂಸ್ಥೆ “ಅಬತರ” ಚಲನ ಚಿತ್ರಕ್ಕೆ ಪ್ರಾಯೋಜಕತ್ವ ನೀಡುತ್ತಿದ್ದು, ಅಲ್ಲದೆ ತುಳು ಚಿತ್ರ ತಂಡವನ್ನು ಪ್ರೋತ್ಸಾಹಿಸುತ್ತಿದೆ ಎಂದು “ಅಬತರ” ತಂಡದ ಪ್ರವರ್ತಕರು ತಿಳಿಸಿದ್ದಾರೆ.

” ಅರುಣಾ ಮಸಾಲಾ ಆ್ಯಪ್”
ಅರುಣಾ ಮಸಾಲಾ ಸಂಸ್ಥೆಯ ಒಂದು ವಿನೂತನ ತಂತ್ರಜ್ಞಾನದ, ಮೊಬೈಲ್ ಸಾಧನಗಳಲ್ಲಿ ಮತ್ತು ಟ್ಯಾಬ್ಲೆಟ್, ಕಂಪ್ಯೂಟರ್ ಗಳಲ್ಲಿ ಸರಳವಾಗಿ ಕೆಲಸ ಮಾಡಲು ವಿನ್ಯಾಸಗೊಳಿಸಲಾಗಿದೆ. ಬಳಸಲು ಬಹಳ ಸುಲಭವಾಗಿದೆ ಮತ್ತು ಅನುಕೂಲಕರವಾಗಿದೆ.ಸಿಂಗಲ್ ಟಚ್ ಮೂಲಕ ಆ್ಯಪ್‌ಗೆ ಸುಲಭ ಪ್ರವೇಶ.
ಆ್ಯಪ್ ನಲ್ಲಿ ಅರುಣಾ ಮಸಾಲೆಯ ಸಂಪೂರ್ಣ ಮಾಹಿತಿ.ಇಚ್ಛಿಸಿದ ಮಸಾಲಾ ಪದಾರ್ಥಗಳನ್ನು ಒಂದೇ ಕ್ಲಿಕ್ನಲ್ಲಿ ಖರೀದಿಸುವ ಅವಕಾಶ. ತಕ್ಷಣ ಬಯಸಿದ ಸ್ಥಳಕ್ಕೆ ಮುಟ್ಟಿಸುವ ಕಾರ್ಯ. (ದೇಶದ ಯಾವುದೇ ಸ್ಥಳಕ್ಕೆ ನಿಗದಿತ ಸಮಯಕ್ಕೆ ತಲುಪಿಸಲಾಗುವುದು. ವಿತರಣಾ ಶುಲ್ಕ ಸಂಪೂರ್ಣ ಉಚಿತವಾಗಿರುತ್ತದೆ.). ಆ್ಯಪ್ ಸಂಪೂರ್ಣ ಉಚಿತವಾಗಿದ್ದು ಬಳಸಲು ಯಾವುದೇ ಶುಲ್ಕವಿಲ್ಲ. ಇದು ಎಂದೆಂದಿಗೂ ಉಚಿತವಾಗಿರುತ್ತೆ ಎಂದು ಕಂಪನಿಯು ಖುದ್ದು ಹೇಳಿಕೊಂಡಿದೆ.

ಅರುಣಾ ಮಸಾಲಾ ಸಂಸ್ಥೆಯ ಬಗ್ಗೆ: ಮಂಗಳೂರು ನಗರದ ಬೈಕಂಪಾಡಿ ಕೈಗಾರಿಕಾ ಪ್ರಾಂಗಣದಲ್ಲಿ ನೆಲೆಗೊಂಡಿರುವ ಅರುಣಾ ಮಸಾಲಾ ಕಂಪೆನಿ 1980ರಿಂದ ಜನತೆಗೆ ರುಚಿ ಮತ್ತು ನಂಬಿಕೆಗೆ ಹೆಸರುವಾಸಿಯಾಗಿ ಬೆಳೆದು ಬಂದಿದೆ. ಅರುಣಾ ಮಸಾಲಾ ಕಂಪೆನಿ ISO 22000:2005 ಪ್ರಮಾಣೀಕರಣ ಪತ್ರವನ್ನು ಪಡೆದ ಕರಾವಳಿ ಕರ್ನಾಟಕದ ಮೊದಲ ಮಸಾಲೆ ಸಂಸ್ಕರಣಾ ಘಟಕ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಆಹಾರ ಉತ್ಪನ್ನಗಳ ಅತ್ಯುನ್ನತ ಶ್ರೇಣಿಯ ಮಸಾಲೆ ಪುಡಿಗಳು, ಮಿಶ್ರಿತ ಮಸಾಲೆ ಪುಡಿಗಳು, ತ್ವರಿತ ತಯಾರಿಕೆಯ ಮಿಶ್ರಣಗಳು, ಉಪ್ಪಿನಕಾಯಿ ಮತ್ತು ಶುಂಠಿ, ಬೆಳ್ಳುಳ್ಳಿ ಪೇಸ್ಟ್ ಗಳನ್ನು ಒಳಗೊಂಡಿದೆ.
ಕರ್ನಾಟಕ, ಮಹಾರಾಷ್ಟ್ರ, ಗೋವಾ ಮತ್ತು ಕೇರಳ, ಹಾಗೆಯೇ ಮಧ್ಯಪ್ರಾಚ್ಯ ಮತ್ತು ಆಸ್ಟ್ರೇಲಿಯಾ ದೇಶದ ಗ್ರಾಹಕರಿಗೂ ರಫ್ತಾಗುತ್ತಿದೆ.ಅರುಣಾ ಮಸಾಲಾ ದಕ್ಷಿಣ ಭಾರತದ ಅಗ್ರ ಮಸಾಲೆ ತಯಾರಕರಲ್ಲಿ ಒಂದಾಗಿದೆ, ಅತ್ಯಾಧುನಿಕ ದರ್ಜೆಯ ಮಸಾಲೆ ಉತ್ಪಾದನಾ ಸೌಲಭ್ಯಗಳು, ಸಂಪೂರ್ಣ ಸ್ವಯಂಚಾಲಿತ ಯಂತ್ರಗಳು ಮತ್ತು ಆಂತರಿಕ ಅಲ್ಟ್ರಾ ಮೋಡರ್ನ್ ಪ್ರಯೋಗಾಲಯವನ್ನು ಹೊಂದಿದೆ. ಹಲವು ವರ್ಷಗಳ ಬದ್ಧತೆಯು ಇಂದು ಹಲವು ಕುಟುಂಬದ ನೆಚ್ಚಿನ ಮಸಾಲೆಯಾಗಿ ಗುರುತಿಸಿಕೊಂಡಿದೆ.

Swathi MG

Recent Posts

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

5 hours ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

5 hours ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

5 hours ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

6 hours ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

6 hours ago

ಭಾರತೀಯರಿಗೆ ಗುಡ್‌ ನ್ಯೂಸ್‌ : ವೀಸಾ ಇಲ್ಲದೆ ರಷ್ಯಾಕ್ಕೆ ಹೋಗುವ ಅವಕಾಶ

ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…

6 hours ago