ಬೆಳ್ತಂಗಡಿ: ಪುನರ್ ನಿರ್ಮಾಣಗೊಳ್ಳುತ್ತಿರುವ ಐತಿಹಾಸಿಕ, ಕಾರಣಿಕ ಕ್ಷೇತ್ರ ಅಳದಂಗಡಿಯ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಧರ್ಮಸ್ಥಳ ಧರ್ಮಾಧಿಕಾರಿ ಡಾl ವೀರೇಂದ್ರ ಹೆಗ್ಗಡೆಯವರು ಶ್ರೀ ಮಂಜುನಾಥ ಸ್ವಾಮಿಯ ಪ್ರಸಾದ ರೂಪವಾಗಿ ರೂ. 10 ಲಕ್ಷ ದೇಣಿಗೆ ನೀಡಿ ಆಶೀರ್ವದಿಸಿದರು.
ಅವರು ಸೋಮವಾರ ಧರ್ಮಸ್ಥಳದಲ್ಲಿ ಶಾಸಕ ಹರೀಶ್ ಪೂಂಜ ಅವರ ಸಮ್ಮುಖದಲ್ಲಿ ಧನಾದೇಶ( ಡಿ.ಡಿ.)ವನ್ನು ದೇವಳದ ಜೀರ್ಣೋದ್ಧಾರ ಸಮಿತಿಗೆ ಹಸ್ತಾಂತರಿಸಿದರು.
ಈ ಸಂದರ್ಭ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಡಾl ಶಶಿಧರ ಡೋಂಗ್ರೆ, ಪ್ರಧಾನ ಕಾರ್ಯದರ್ಶಿ ನಿತ್ಯಾನಂದ ಶೆಟ್ಟಿ ನೊಚ್ಚ, ಕೋಶಾಧಿಕಾರಿ ಅನಿಲ್ ಕುಮಾರ್ ಮಾಳಿಗೆ ಮನೆ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಗಂಗಾಧರ ಮಿತ್ತಮಾರು, ಸದಸ್ಯರಾದ ಸುರೇಶ್ ಶೆಟ್ಟಿ ಕುರೆಲ್ಯ, ಜಗನ್ನಾಥ ಶೆಟ್ಟಿ ಅಳದಂಗಡಿ ಉಪಸ್ಥಿತರಿದ್ದರು.