ಮಂಗಳೂರು: ಕೊರೋನಾ ಲಾಕ್ಡೌನ್ ಬಳಿಕ ಇದೀಗ ನನ್ನ ಪುತ್ರ ಅಭಿನಯಿಸಿರುವ ‘ತಡಪ್’ ಹಿಂದಿ ಚಲನಚಿತ್ರ ಡಿ.೩ರಂದು ಬಿಡುಗಡೆಗೊಳ್ಳುತ್ತಿದೆ. ಜನ ಇಷ್ಟಪಟ್ಟು ನನ್ನ ಸಿನಿಮಾ ವೀಕ್ಷಣೆಗೆ ಬರುತ್ತಾರೆ. ನನಗೆ ಇಂಡಸ್ಟ್ರಿಯಲ್ಲಿ ನೀಡಿದ ಪ್ರೋತ್ಸಾಹವನ್ನೇ ಪುತ್ರನಿಗೂ ಪ್ರೇಕ್ಷಕರು ನೀಡಲಿದ್ದಾರೆ ಎಂಬ ವಿಶ್ವಾಸವಿದೆ ಎಂದು ಖ್ಯಾತ ಬಾಲಿವುಡ್ ನಟ ಸುನೀಲ್ ಶೆಟ್ಟಿ ಹೇಳಿದರು.
ಡಿ.೩ರಂದು ಪುತ್ರ ಅಹಾನ್ ಶೆಟ್ಟಿ ಅವರ ‘ತಡಪ್’ ಹಿಂದಿ ಚಲನಚಿತ್ರ ಬಿಡುಗಡೆಯಾಗಲಿರುವ ಹಿನ್ನೆಲೆಯಲ್ಲಿ ನಗರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.
ಕೋವಿಡ್ ಕಾರಣದಿಂದ ತಡಪ್ ಸಿನಿಮಾ ಬಿಡುಗಡೆ ಮುಂದಕ್ಕೆ ಹೋಗಿದ್ದ ಸಂದರ್ಭ ಒಟಿಟಿ ಮೂಲಕ ಬಿಡುಗಡೆ ಮಾಡಬೇಕು ಎಂದು ಅನೇಕ ಆಫರ್ಗಳು ಬಂದಿದ್ದವು. ಆದರೆ ನಾವು ದೊಡ್ಡ ಸ್ಕ್ರೀನ್ನಲ್ಲೇ ಪುತ್ರನ ಸಿನಿಮಾ ಬಿಡುಗಡೆ ಮಾಡಬೇಕು ಎಂಬ ಆಶಯದಿಂದ ಇಷ್ಟು ಸಮಯ ಕಾದು ಇದೀಗ ಮುಹೂರ್ತ ಫಿಕ್ಸ್ ಮಾಡಿದ್ದೇವೆ. ವಿಶ್ವದ ವಿವಿಧ ಚಿತ್ರ ಮಂದಿರಗಳಲ್ಲಿ ಏಕಕಾಲದಲ್ಲಿ ಸಿನಿಮಾ ತೆರೆ ಮೇಲೆ ಬರಲಿದೆ ಎಂದರು.
ಒಬ್ಬ ತುಳುವನಾಗಿ ನಾನು ಈ ಮಟ್ಟಕ್ಕೆ ಬೆಳೆದಿದ್ದೇನೆ. ತುಳು ಸಂಸ್ಕೃತಿಯೇ ಅಂತದ್ದು. ನಮ್ಮನ್ನು ಎಲ್ಲಿ ಬೇಕಾದರೂ ಬೆಳೆಸುತ್ತದೆ. ನಮ್ಮ ಹಿರಿಯರು ಕೂಡಾ ಅದೇ ಹಾದಿಯಲ್ಲಿ ಬೆಳೆದು ಬಂದವರು. ನನ್ನ ಪುತ್ರನನ್ನು ಕೂಡಾ ಹಾಗೆಯೇ ಬೆಳೆಸಿದ್ದೇನೆ. ಆದರೆ ಆತನಿಗೆ ತುಳು ಭಾಷೆ ಬರುವುದಿಲ್ಲ. ಕಾರಣ ಆತನ ಅಮ್ಮನಿಗೆ ತುಳು ಗೊತ್ತಿಲ್ಲ. ಅದಕ್ಕಾಗಿ ಮನೆಯಲ್ಲಿ ನಾವು ತುಳು ಮಾತನಾಡದ ಕಾರಣಕ್ಕೆ ಪುತ್ರ ತುಳು ಕಲೀಲಿಲ್ಲ. ಆದರೆ ನಮ್ಮ ಸಂಸ್ಕೃತಿಯನ್ನು ಆತ ಚೆನ್ನಾಗಿ ಮೆಚ್ಚಿಕೊಂಡಿದ್ದಾನೆ. ಅದೇ ಕಾರಣಕ್ಕಾಗಿ ಸಿನಿಮಾ ಬಿಡುಗಡೆ ಮುಂಚೆ ತುಳುನಾಡಿದ ಆರಾಧ್ಯ ದೈವ, ದೇವರುಗಳ ಆಶೀರ್ವಾದ ಪಡೆಯಲು ಇಲ್ಲಿಗೆ ಬಂದಿದ್ದೇವೆ ಎಂದು ಅವರು ಹೇಳಿದರು.
ಸುನಿಲ್ ಶೆಟ್ಟಿ ಅವರ ಪುತ್ರ ಅಹಾನ್ ಶೆಟ್ಟಿ, ಸಿನಿಮಾ ನಿರ್ಮಾಪಕ ರಾಜೇಂದ್ರ ಸಿಂಗ್ ಬಾಬು, ದೇವಾನಂದ ಶೆಟ್ಟಿ, ವಿಜಯಕುಮಾರ್ ಕೊಡಿಯಾಲ್ಬೈಲ್ ಉಪಸ್ಥಿತರಿದ್ದರು
ರೈಲಿಗೆ ಸಿಲುಕಿ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಂಜನಗೂಡು ತಾಲೂಕಿನ ಬಸವನಪುರ ಗ್ರಾಮದ ಬಳಿ ನಡೆದಿದೆ.
ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನಲ್ಲಿರುವ ಪವಾಡ ಪುರುಷ ಶ್ರೀ ಮಲೆ ಮಹದೇಶ್ವರನಿಗೆ ಬೆಂಗಳೂರಿನ ನಾಗಮಣಿ.ಎಂ ಮತ್ತು ಕುಟುಂಬ 01 ಕೆಜಿ…
ಬೈಕ್ ಸ್ಫೋಟಗೊಂಡು ಸುಮಾರು ಹತ್ತು ಮಂದಿ ಗಂಭೀರವಾಗಿ ಗಾಯಗೊಂಡಿರುವ ಭೀಕರ ಘಟನೆ ಹೈದರಾಬಾದ್ನಲ್ಲಿ ನಡೆದಿದೆ. ಈ ಭಯಾನಕ ಘಟನೆ…
ದ್ವಿಚಕ್ರ ವಾಹನದಲ್ಲಿ ಗಾಂಜಾ ಸಾಗಣೆ ಮಾಡುತ್ತಿದ್ದ ವೇಳೆ ಗುಂಡ್ಲುಪೇಟೆ ಪೊಲೀಸರು ದಾಳಿ 2 ಕೆ.ಜಿ ಗಾಂಜಾ ಸಮೇತ ಇಬ್ಬರು ಆರೋಪಿಗಳನ್ನು…
ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಗೆ ಭಾನುವಾರ ಇ-ಮೇಲ್ ಮೂಲಕ ಬೆದರಿಕಯೊಂದು ಬಂದಿದ್ದು ಅದರಂತೆ ದೇಶಾದ್ಯಂತ 13 ವಿಮಾನ ನಿಲ್ದಾಣಗಳನ್ನು ಸ್ಫೋಟಿಸುವುದಾಗಿ…
ಶಿವಮೊಗ್ಗದಲ್ಲಿ ನಡೆದಿದ್ದ ಗ್ಯಾಂಗ್ ವಾರ್ ಪ್ರಕರಣದಲ್ಲಿ ಮೂವರನ್ನು ನಡುಬೀದಿಯಲ್ಲಿ ಕೊಚ್ಚಿ ಕೊಲೆ ಮಾಡಿದ್ದ ಆರೋಪಿಗಳಲ್ಲಿ ಒಬ್ಬ ರೌಡಿ ಶೀಟರ್ ಕಾಲಿಗೆ…