News Karnataka Kannada
Monday, April 29 2024
ಮಂಗಳೂರು

ಆಸಿಫ್ ಆಪತ್ಭಾಂಧವ ಮೇಲೆ ಮಂಗಳಮುಖಿಯರಿಂದ ಹಲ್ಲೆ ಯತ್ನ; 6 ಮಂದಿ ಬಂಧನ

Mangalumukhiyaru
Photo Credit : News Kannada

ಸುರತ್ಕಲ್ : ಕಳೆದ ಕೆಲವು ದಿನಗಳಿಂದ ಎನ್‌ಐಟಿಕೆ ಬಳಿ ಇರುವ ಟೋಲ್ ಗೇಟ್ ವಿರುದ್ಧ ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಸಾಮಾಜಿಕ ಕಾರ್ಯಕರ್ತ ಆಸಿಫ್ ಆಪತ್ಭಾಂಧವ ಮೇಲೆ  ಮಂಗಳಮುಖಿಯರು ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ 6 ಮಂಗಳಮುಖಿಯರನ್ನು ಪೊಲೀಸರು ಬಂಧಿಸಿದ್ದಾರೆ . ಬಂಧಿತರನ್ನು ವಾಸವಿ ಗೌಡ , ಲಿಪಿಕಾ ,ಹಿಮಾ ,ಆದ್ಯ ,ಮಾಯಾ, ಮೈತ್ರಿ ,ಎಂದು ಗುರುತಿಸಲಾಗಿದೆ.

ಕಳೆದ ಮಧ್ಯರಾತ್ರಿ ಸುಮಾರು 12.30ರ ಸುಮಾರಿಗೆ ಮೊದಲು ಇಬ್ಬರು ಮಂಗಳಮುಖಿಯರು ಆಗಮಿಸಿದ್ದರು. ನಂತರ ಮಂಗಳಮುಖಿಯರ ತಂಡ ಆಗಮಿಸಿ, ಪ್ರತಿಭಟನಾ ನಿರತರಿಗೆ ಅವಾಚ್ಯ ಶಬ್ಧಗಳಿಂದ ಬಯ್ದು, ಹಲ್ಲೆಗೆ ಯತ್ನಿಸಲಾಗಿದೆ ಎಂದು ಆರೋಪಿಸಲಾಗಿದೆ.

ಕೂಡಲೇ ಆಸಿಫ್ ಆಪತ್ಭಾಂಧವ ಫೇಸ್ ಬುಕ್ ಲೈವ್ ವಿಡಿಯೋ ಮಾಡಿದ್ದಾರೆ. ತಂಡದಲ್ಲಿದ್ದ ಹಲವು ಮಂಗಳಮುಖಿಯರು ಬಟ್ಟೆ ಎತ್ತಿ ನರ್ತನ ಪ್ರಾರಂಭಿಸಿದ್ದಾರೆ. ತಕ್ಷಣ ಸ್ಥಳಕ್ಕಾಗಮಿಸಿದ ಪೊಲೀಸರು, ಪರಿಸ್ಥಿತಿ ತಿಳಿಗೊಳಿಸಿದ್ದಾರೆ.

ಈ ಪ್ರತಿಭಟನಾ ವೇದಿಕೆಯನ್ನು ನಾಳೆಯೇ ಒದ್ದು ಉರುಳಿಸುತ್ತೇವೆ. ನಿಮ್ಮನ್ನು ಇಲ್ಲಿಂದ ಓಡಿಸುತ್ತೇವೆ. ನಾಳೆ ನಿಮ್ಮನ್ನು ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಕೂರಿಸುತ್ತೇವೆ ಎಂದು ಮಂಗಳಮುಖಿಯರು ಬೆದರಿಕೆ ಒಡ್ಡಿದ್ದಾರೆ ಎಂದು ದೂರಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು