ಮಂಗಳೂರು: ಇಂದಿನಿಂದ ಪೂರ್ಣಪ್ರಮಾಣದಲ್ಲಿ ಶಾಲೆಗಳು ಆರಂಭವಾಗಿವೆ ಜತೆಗೆ ಶಾಲೆಗೆ ಆಗಮಿಸುವ ಮೊದಲೇ ದಿನ ಮಕ್ಕಳಿಗೆ ಸಿಹಿ ವಿತರಿಸಿ ಬರಮಾಡಿಕೊಳ್ಳಲಾಗಿತ್ತು ಮತ್ತು ಸಾಂಸ್ಕೃತಿಕಾರ್ಯಕ್ರಮ ನಡೆಸಿ ಖುಷಿಯಿಂದ ಶಾಲೆಗೆ ಬರುವಂತಹ ವಾತಾವರಣ ನಿರ್ಮಿಸಬೇಕೆಂದು ಶಿಕ್ಷಣ ಇಲಾಖೆಯು ಶಿಕ್ಷಕರಿಗೆ ನಿರ್ದೇಶನ ನೀಡಿದೆ.
2022-23 ಶೈಕ್ಷಣಿಕ ವರ್ಷವನ್ನು ನಿಗದಿತ ಸಮಯಕ್ಕಿಂತ ಹದಿನೈದು ದಿನ ಮೊದಲೇ ಆರಂಭಿಸಲಾಗುತ್ತಿದೆ ಈ ವರ್ಷವನ್ನು ಕಲಿಕಾ ಚೇತರಿಕ ವರ್ಷವೆಂದು ಘೋಷಿಸಲಾಗಿದೆ .ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ತುಮಕೂರಿನಲ್ಲಿ ಕಲಿಕಾ ಚೇತರಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ .ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ಹಾಗೂ ಹಿಂದಿನ ವರ್ಷ ಬಸ್ ಪಾಸುಗಳನ್ನು ತೋರಿಸಿ ಕೆಎಸ್ಆರ್ಟಿಸಿ ಮತ್ತು ಬಿಎಂಟಿಸಿ ಬಸ್ಸುಗಳಲ್ಲಿ ಪ್ರಯಾಣಿಸಲು ವ್ಯವಸ್ಥೆ ಕಲ್ಪಿಸಿಕೊಡಲಾಗಿದೆ .2ವರ್ಷ ಮನೆಯಲ್ಲೇ ಇದ್ದ ಮಕ್ಕಳು ಶಾಲೆಗೆ ಬಂದ ತಕ್ಷಣ ಪಾಠಗಳಿಗೆ ಹೊಂದಿಕೊಳ್ಳಲು ಕಷ್ಟವಾಗಲಿದೆ ಎಂಬುದನ್ನು ಅರಿತಿರುವ ಶಿಕ್ಷಣ ಇಲಾಖೆ ಪಠ್ಯೇತರ ಚಟುವಟಿಕೆಗಳ ಮೂಲಕ ಮಕ್ಕಳನ್ನು ಶಾಲೆಯತ್ತಾ ಆಕರ್ಷಿಸಲು ಇದಕ್ಕಾಗಿ ಆರಂಭದ 2ವಾರ ಮಳೆಬಿಲ್ಲು ಕಾರ್ಯಕ್ರಮ ರೂಪಿಸಿದೆ.
ಶಾಲೆಗಳಲ್ಲಿ ಕುಡಿಯುವ ನೀರು ಮಧ್ಯಾಹ್ನದ ಬಿಸಿಯೂಟ ಸಮವಸ್ತ್ರ ಪಠ್ಯಪುಸ್ತಕ ಹಾಜರಾತಿ ದಾಖಲಾತಿ ಇವುಗಳನ್ನು ಪರಿಶೀಲಿಸಲು ಅಕ್ಷರ ದಾಸೋಹ ಕಾರ್ಯಕ್ರಮ ಅನುಷ್ಠಾನ ಮಕ್ಕಳ ದಾಖಲಾತಿ ಪ್ರಗತಿ ಸಹಿತ ಶಾಲಾ ಯೋಜನೆಗಳ ಕುರಿತು ಬಿಇಒ ಹಾಗೂ ಎಸ್ ಡಿಎಂಸಿಗಳು ಸಭೆ ನಡೆಸುವಂತೆ ಸೂಚಿಸಲಾಗಿದೆ .ಆರಂಭದ ದಿನವೇ ಶಾಲೆಯಲ್ಲಿ ಶಿಕ್ಷಕರು ಇರುವಂತೆ ಇಲಾಖೆ ನೋಡಿಕೊಂಡಿದೆ ಇದಕ್ಕಾಗಿ ಈ ಬದಿಯಲ್ಲಿ ಸಾವಿರ ಪ್ರಾಥಮಿಕ ಶಾಲಾ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳುವಂತೆ ಜಿಲ್ಲಾ ಉಪನಿರ್ದೇಶಕರಿಗೆ ಸೂಚನೆ ನೀಡಿದೆ ಎಂದು ಪ್ರಾಥಮಿಕ ಶಿಕ್ಷಣ ಇಲಾಖೆ ನಿರ್ದೇಶಕ ಪ್ರಸನ್ನಕುಮಾರ್ ತಿಳಿಸಿದ್ದಾರೆ.