ಮಂಗಳೂರು

ಉಜಿರೆಯಲ್ಲಿ ಅಖಿಲ ಭಾರತ ಸಾಹಿತ್ಯ ಸಮ್ಮೇಳನಕ್ಕೆ ಭರದ ಸಿದ್ಧತೆ

ಬೆಳ್ತಂಗಡಿ: ಉಜಿರೆಯಲ್ಲಿ ಮಾ. 19 ಹಾಗೂ 20ರಂದು ಎರಡು ದಿನಗಳ ಕಾಲ ಅಖಿಲ ಭಾರತೀಯ ಸಾಹಿತ್ಯ ಪರಿಷತ್ತಿನ ಮೂರನೇ ರಾಜ್ಯ ಮಟ್ಟದ ಅಧಿವೇಶನ ನಡೆಯಲಿದ್ದು ಭರದ ಸಿದ್ಧತೆ ನಡೆಯುತ್ತಿದೆ. ಈ ಹಿಂದೆ ಜನವರಿ 8 ಮತ್ತು 9ರಂದು ನಿಗದಿಯಾಗಿದ್ದ ಈ ಸಮ್ಮೇಳನ ಕೋವಿಡ್ ನಿಯಮಾವಳಿಗಳಿಂದಾಗಿ ಮುಂದೂಡಲ್ಪಟ್ಟಿತ್ತು.

ರಾಜ್ಯ ಹಾಗೂ ರಾಷ್ಟç ಮಟ್ಟದ ಸಾಹಿತ್ಯ ಅಭಿಮಾನಿಗಳು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ‘ನುಡಿ ಸಾಮ್ರಾಜ್ಯದಲ್ಲಿ ಸ್ವರಾಜ್ಯ’ ಪರಿಕಲ್ಪನೆಯಡಿ ನಡೆಯಲಿರುವ ಈ ಸಾಹಿತ್ಯೋತ್ಸವದಲ್ಲಿ ವಿವಿಧ ಗೋಷ್ಠಿಗಳು ಕವಿ ಸಮ್ಮೇಳನ, ಪುಸ್ತಕ ಪ್ರದರ್ಶನ ಮಾರಾಟ, ವಸ್ತು ಪ್ರದರ್ಶನ ಮಳಿಗೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ರಸದೌತಣ ನಡೆಯಲಿದೆ.

ಜ.19ರಂದು ಬೆಳಿಗ್ಗೆ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಅಧಿವೇಶನವನ್ನು ಉದ್ಘಾಟಿಸಲಿದ್ದು, ಸಾಹಿತಿ ಡಾ.ನಾ ಮೊಗಸಾಲೆ ಅಧ್ಯಕ್ಷತೆ ವಹಿಸಲಿದ್ದಾರೆ. ರಾಜ್ಯ ಉಪಾಧ್ಯಕ್ಷ ಹರಿಪ್ರಕಾಶ ಕೋಣೆಮನೆ ಪ್ರಾಸ್ತಾವಿಕ ಮಾತುಗಳನ್ನಾಡಲಿದ್ದಾರೆ.
ವಸ್ತು ಪ್ರದರ್ಶನವನ್ನು ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿ ಜಿಲ್ಲಾ ಅಧ್ಯಕ್ಷ ಸಿ.ಎ.ಶಾಂತಾರಾಮ ಶೆಟ್ಟಿ ಉದ್ಘಾಟಿಸಲಿದ್ದಾರೆ.

ಅಪರಾಹ್ನ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ರಾಜ್ಯ ಸಹಕಾರ್ಯದರ್ಶಿ ಕ.ವೆಂ.ನಾಗರಾಜ ಪುಸ್ತಕ ಪ್ರಕಟಣೆ ಬಗ್ಗೆ ಮಾಹಿತಿ ನೀಡಲಿದ್ದಾರೆ. ರಾಜ್ಯ ಪ್ರಧಾನ ಕಾರ್ಯದರ್ಶಿ ರಘುನಂದನ ಭಟ್ ಸಮ್ಮೇಳನದ ಕುರಿತು ಪರಿಚಯ ಮಾಡಲಿದ್ದಾರೆ. ರಾಜ್ಯಾಧ್ಯಕ್ಷ ಪ್ರೊ.ಪ್ರೇಮ ಶಂಕರ ಸಮ್ಮೇಳನದ ಕುರಿತು ಅವಲೋಕನ ಮಾತುಗಳನ್ನಾಡಲಿದ್ದಾರೆ.

ಸಂಜೆಯ ಕಾರ್ಯಕ್ರಮದಲ್ಲಿ ‘ಸಾಹಿತ್ಯ ಪರಿಚಾರಕ ಹರ್ಷವರ್ಧನ ಶೀಲವಂತ ಸಾಹಿತ್ಯದಲ್ಲಿ ಸಾಹಿತ್ಯದಲ್ಲಿ ಮೊದಲನೇ ಸ್ವಾತಂತ್ರö್ಯ ಹೋರಾಟ’, ಅಂಕಣಕಾರ ರೋಹಿತ್ ಚಕ್ರತೀರ್ಥ ‘ಸಾಹಿತ್ಯದಲ್ಲಿ ಕ್ರಾಂತಿಸೂರ್ಯ’ ಕುರಿತು ಉಪನ್ಯಾಸ ನೀಡಲಿದ್ದಾರೆ.ವಿಮರ್ಶಕಿ ಡಾ.ಎನ್.ಆರ್.ಲಲಿತಾಂಬಾ ಅವಲೋಕನಗೈಯಲಿದ್ದಾರೆ.

ಸಂಜೆ ಸಾಂಸ್ಕೃತಿಕ ಕಾರ್ಯಕ್ರಮವನ್ನು ಮೂಡಬಿದರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಡಾ.ಮೋಹನ್ ಆಳ್ವ ಉದ್ಘಾಟಿಸಲಿದ್ದಾರೆ. ರಾಜ್ಯದ ವಿವಿಧೆಡೆಯ ಕಲಾವಿದರು ಹಾಗೂ ಆಳ್ವಾಸ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳಿಂದ ಮೂರು ಗಂಟೆಯ ಅವಧಿಗೆ ಸಾಂಸ್ಕೃತಿಕ ರಸದೌತಣ ನಡೆಯಲಿದೆ.

ಜನವರಿ 20ರಂದು ಬೆಳಿಗ್ಗೆ ಸಮನ್ವಯ ಕವಿ ಸಮ್ಮಿಲನದಲ್ಲಿ ಸೂರ್ಯ ಹೆಬ್ಬಾರ್ ಬೆಂಗಳೂರು, ಸುಜಾತಾ ಹೆಗಡೆ ಉಮ್ಮಚಿಗಿ, ಅನಿತಾ ಪೂಜಾರಿ ಮುಂಬೈ, ತನ್ಮಯಿ ಪ್ರೇಮಕುಮಾರ್ ಚಿಕ್ಕಮಗಳೂರು, ವೆಂಕಟೇಶನಾಯಕ ಮಂಗಳೂರು, ವಿದ್ಯಾಶ್ರೀ ಅಡೂರು ಮುಂಡಾಜೆ, ಸೋಮಶೇಖರ ಕೆ ತುಮಕೂರು, ಪೂರ್ಣಇಮಾ ಸುರೇಶ ಹಿರಿಯಡಕ, ಹೃತ್ಪೂರ್ವಕ ಕೋರ್ನ ಮಡಿಕೇರಿ, ಚಿನ್ಮಯ ಬೆಂಗಳೂರು, ಸುಭಾಷಿಣಿ ಬೆಳ್ತಂಗಡಿ, ಅಣ್ಣಪ್ಪ ಅರಬಗಟ್ಟೆ ತೀರ್ಥಹಳ್ಳಿ, ಮಾಣಿಮಾಡ ಜಾನಕೀ ಮಾಚಯ್ಯ ಮಡಿಕೇರಿ, ಸುಷ್ಮಾ ಗುರುಪುತ್ರ ಗೋಕಾಕ, ಡಾ.ಸ್ನೇಹಾ ಫಾತರಪೇಕರ ಅಂಕೋಲ, ವೀರೇಶ ಬಿ.ಅಜ್ಜಣ್ಣನವರ್ ಹರಿಹರ, ಡಾ.ಮೀನಾಕ್ಷಿ ರಾಮಚಂದ್ರ ಮಂಗಳೂರು ಮತ್ತು ಪರಿಣಿತ ರವಿ ಎರ್ನಾಕುಲಂ ಸ್ವರಚಿತ ಕವಿತೆ ವಾಚನ ಮಾಡಲಿದ್ದಾರೆ. ಕವಿಯತ್ರಿ ಪ್ರೊ.ಸುಮಾ ವಸಂತ ಸಾವಂತ್ ಅವಲೋಕನಗೈಯಲಿದ್ದಾರೆ.

ಅಂಕಣಕಾರ ಡಾ.ರೋಹಿಣಾಕ್ಷ ಶಿರ್ಲಾಲು ‘ಲಾವಣಿಗಳಲ್ಲಿ ಸ್ವರಾಜ್ಯ ಕ್ರಾಂತಿ’, ಇಂಗ್ಲಿಷ್ ಉಪನ್ಯಾಸಕಿ ಪವಿತ್ರಾ ಮೃತ್ಯುಂಜಯಸ್ವಾಮಿ ‘ಕನ್ನಡ ನುಡಿಯಲ್ಲಿ ಸ್ವಾತಂತ್ರö್ಯ ಹೋರಾಟಗಾರ್ತಿಯರು’ ಕುರಿತು ವಿಚಾರಗಳನ್ನು ಮಂಡಿಸಲಿದ್ದಾರೆ. ಅಂಕಣಕಾರ ಪ್ರಭಾಕರ ಕಾರಂತ ಅವಲೋಕನಗೈಯಲಿದ್ದಾರೆ.

ಮೈಸೂರು ಆಕಾಶವಾಣಿಯ ದಿವಾಕರ ಹೆಗಡೆ ಸಮಾರೋಪ ಭಾಷಣ ಮಾಡುವರು. ಅಖಿಲ ಭಾರತ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ಪ್ರೊ.ಪ್ರೇಮ ಶಂಕರ ಮತ್ತು ಸಾಹಿತಿ ಡಾ.ನಾ ಮೊಗಸಾಲೆ ಉಪಸ್ಥಿತರಿರುವರು.

ಸಮಸ್ತ ಭಾರತೀಯ ಭಾಷೆಗಳ ನಡುವೆ ಸೌಹಾರ್ದ ಭಾವವನ್ನು ಜಾಗೃತಗೊಳಿಸುವ ಧ್ಯೇಯೋದ್ದೇಶದೊಂದಿಗೆ ಈ ಸಮಾವೇಶ ಮೇಳೈಸಲಿದೆ. ಸಾಹಿತ್ಯಾಭಿಮಾನಿಗಳಿಗೆ ಪ್ರತಿನಿಧಿಗಳಿಗೆ ಊಟೋಪಚಾರ, ವಸತಿ ಹಾಗೂ ವಾಹನ ಪಾರ್ಕಿಂಗ್ ವ್ಯವಸ್ಥೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಕರೋನಾ ಹಿನ್ನೆಲೆಯಲ್ಲಿ ಸರ್ಕಾರದ ಸಂಪೂರ್ಣ ಮಾರ್ಗಸೂಚಿಯನ್ವಯ ಸಮ್ಮೇಳನವನ್ನು ನಡೆಸಲು ತೀರ್ಮಾನಿಸಲಾಗಿದೆ.

Sneha Gowda

Recent Posts

ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್ ಘೋಷಣೆ: ಸಿಎಂಗೆ ಕೆಯುಡಬ್ಲ್ಯುಜೆ ವತಿಯಿಂದ ಅಭಿನಂದನೆ

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಬಹುದಿನದ ಬೇಡಿಕೆಯಾಗಿದ್ದ ಗ್ರಾಮೀಣ ಪತ್ರಕರ್ತರರಿಗೆ ಬಸ್ ಪಾಸ್ ನೀಡುವ ಸಂಬಂಧ ಇತ್ತಿಚೆಗೆ ದಾವಣಗೆರೆಯಲ್ಲಿ ನಡೆದ…

7 mins ago

ರಾಹುಲ್ ಗಾಂಧಿಗೆ 1000 ರೂ. ದಂಡ ವಿಧಿಸಿದ ಜಾರ್ಖಂಡ್ ಹೈಕೋರ್ಟ್

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿ…

9 mins ago

ಮಂಗಳೂರು: ಪಿ.ಎ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾರ್ಷಿಕೋತ್ಸವ ಆಚರಣೆ

“ಅಧ್ಯಾಪಕರುಗಳ ಪ್ರೋತ್ಸಾಹ ಮತ್ತು ಬೆಂಬಲವೇ ಇವತ್ತಿನ ಈ ದಿನದ ಯಶಸ್ಸು ಮತ್ತು ಇಲ್ಲಿಯ ಕಾರ್ಯಕ್ರಮಗಳೇ ಈ ಕಾಲೇಜಿನ ಮಹತ್ವವನ್ನು ಸಾರುತ್ತಿದೆ…

13 mins ago

40 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಇಂಡಿಯಾ ಮೈತ್ರಿಕೂಟ ಗೆಲ್ಲಲಿದೆ: ಡಿ.ಕೆ.ಶಿವಕುಮಾರ್

ಉತ್ತರ ಪ್ರದೇಶದಲ್ಲಿ 40 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಇಂಡಿಯಾ ಮೈತ್ರಿಕೂಟ ಗೆಲ್ಲಲಿದೆ. ದೇಶದೆಲ್ಲೆಡೆ ಕಾಂಗ್ರೆಸ್ ಪಕ್ಷ ಹಾಗೂ ಇಂಡಿಯಾ ಮೈತ್ರಿಕೂಟದ…

23 mins ago

ಕೇಜ್ರಿವಾಲ್ ನಿವಾಸದಲ್ಲಿ ಸ್ವಾತಿ ಮಲಿವಾಲ್ ಜಗಳದ ವಿಡಿಯೋ ತುಣುಕು ವೈರಲ್

ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರ ಸಹಾಯಕ ಬಿಭವ್ ಕುಮಾರ್ ಅವರು ನಗರದ ಸಿವಿಲ್ ಲೈನ್ಸ್‌ನಲ್ಲಿರುವ ದೆಹಲಿ…

33 mins ago

ಕೇಜ್ರಿವಾಲ್‌ ನಾಚಿಕೆಯಿಲ್ಲದೇ ಆರೋಪಿ ಬಿಭವ್‌ ಕುಮಾರ್‌ ಜೊತೆ ತಿರುಗಾಟ: ನಿರ್ಮಲಾ ಸೀತಾರಾಮನ್‌

ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್‌ ಮೇಲಿನ ಹಲ್ಲೆಯನ್ನು ಖಂಡಿಸಿ ಮಾತನಾಡದ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ವಿರುದ್ಧ ಕೇಂದ್ರ ಹಣಕಾಸು ಸಚಿವೆ…

34 mins ago