News Karnataka Kannada
Tuesday, April 30 2024
ಮಂಗಳೂರು

ಉಜಿರೆ: ಯಕ್ಷೋತ್ಸವ-2021 ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಡಿ.ಹರ್ಷೇಂದ್ರ ಕುಮಾರ್

Yakshagana
Photo Credit :

ಬೆಳ್ತಂಗಡಿ: ಕಲಾವಿದನನ್ನು ಅಭಿಮಾನಿಗಳೇ ಗುರುತಿಸಿ ಗೌರವಿಸುವುದು ಉತ್ತಮ ಚಿಂತನೆ. ಯಕ್ಷಗಾನ ಸಹಿತ ಯಾವುದೇ ಕಾರ್ಯಕ್ರಮಗಳನ್ನು ಆಯೋಜಿಸುವಲ್ಲಿ ಶಿಸ್ತು ಪ್ರಮುಖ ಪಾತ್ರ ವಹಿಸುತ್ತದೆ. ಶಿಸ್ತಿನಿಂದ ನಡೆಯುವ ಕಾರ್ಯಕ್ರಮಗಳು ಅಭಿಮಾನಿಗಳನ್ನು ಆಕರ್ಷಿಸುತ್ತವೆ. ಬದ್ಧತೆಯುಳ್ಳ ಕಲಾವಿದರು ಭವಿಷ್ಯದಲ್ಲಿ ಮಿಂಚಲು ಸಾಧ್ಯ ಎಂದು ಧರ್ಮಸ್ಥಳದ ಡಿ.ಹರ್ಷೇಂದ್ರ ಕುಮಾರ್ ಹೇಳಿದರು.

ಅವರು ಮಂಗಳವಾರ ಉಜಿರೆಯಲ್ಲಿ ಯಕ್ಷೋತ್ಸವ-2021 ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ಆಶ್ರಯದಲ್ಲಿ ಯಕ್ಷಜನ ಸಭಾ ನೇತೃತ್ವದಲ್ಲಿ,ಬೆಳ್ತಂಗಡಿ ರೋಟರಿಕ್ಲಬ್ ಸಹಯೋಗದಲ್ಲಿ ಡಿ.30ರವರೆಗೆ ಯಕ್ಷಗಾನ ಕಾರ್ಯಕ್ರಮ ಜರಗಲಿದೆ.

ಕರ್ನಾಟಕ ಲೋಕಸೇವಾ ಆಯೋಗದ ನಿವೃತ್ತ ಅಧ್ಯಕ್ಷ ಟಿ.ಶ್ಯಾಮ್ ಭಟ್,ಕ.ಸಾ.ಪ. ಜಿಲ್ಲಾಧ್ಯಕ್ಷ ಡಾ.ಎಂ.ಪಿ.ಶ್ರೀನಾಥ್ ಉಪಸ್ಥಿತರಿದ್ದರು. ಯಕ್ಷಜನಸಭಾದ ಗೌರವಾಧ್ಯಕ್ಷ ಶರತ್ ಕೃಷ್ಣ ಪಡುವೆಟ್ನಾಯ ಸ್ವಾಗತಿಸಿದರು. ಅಧ್ಯಕ್ಷ ಡಾ.ಎಂ.ಎಂ.ದಯಾಕರ್ ವಂದಿಸಿದರು. ಶ್ರೀಧರ ಭಟ್ ಕಾರ್ಯಕ್ರಮ ನಿರೂಪಿಸಿದರು.

ಯಕ್ಷ ಜನಾರ್ದನ ಪ್ರಶಸ್ತಿ

ಹಿರಿಯ ಯಕ್ಷಗಾನ ಕಲಾವಿದ ಕುಂಬ್ಳೆ ಸುಂದರರಾವ್ ಅವರಿಗೆ ಯಕ್ಷ ಜನಾರ್ದನ ಪ್ರಶಸ್ತಿ ಪ್ರದಾನ ಮಾಡಲಾಯಿತು. ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಅವರು ಪ್ರಶಸ್ತಿಗಳ ಹಿಂದೆ ಪ್ರೇಕ್ಷಕರ ಪ್ರೀತಿ ಗೌರವ ಇದೆ. ಅವರ ವಿಶ್ವಾಸಕ್ಕೆ ತಕ್ಕಂತೆ ನಿರ್ವಂಚನೆಯಿಂದ ಮನರಂಜನೆ ನೀಡುವುದು ಕಲಾವಿದರ ಕರ್ತವ್ಯ ಎಂದು ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು