News Karnataka Kannada
Monday, April 29 2024
ಮಂಗಳೂರು

ಉಡುಪಿ-ಕಾಸರಗೋಡು ೪೦೦ ಕೆ.ವಿ. ವಿದ್ಯುತ್ ಪ್ರಸರಣ ಮಾರ್ಗ ವಿರೋಧಿಸಿ ಪ್ರತಿಭಟನೆ

Ramanath Rai
Photo Credit :

ಬಂಟ್ವಾಳ : ಉಡುಪಿ – ಕಾಸರಗೋಡು ೪೦೦ ಕೆ.ವಿ. ವಿದ್ಯುತ್ ಪ್ರಸರಣ ಮಾರ್ಗವಿರೋಧಿಸಿ ಹೋರಾಟ ಸಮಿತಿ ಆಶ್ರಯದಲ್ಲಿ ೪೦೦ ವಿದ್ಯುತ್ ಪ್ರಸರಣ ತಂತಿ ಅಳವಡಿಸುವ ಯೋಜನೆಯನ್ನು ಕೈ ಬಿಡಬೇಕು ಎಂದು ಆಗ್ರಹಿಸಿ ಬೃಹತ್ ಪ್ರತಿಭಟನಾ ಧರಣಿ ಬಂಟ್ವಾಳದ ಜಕ್ರಿಬೆಟ್ಟು ಜಂಕ್ಷನ್‌ನಲ್ಲಿ ಮಂಗಳವಾರ ನಡೆಯಿತು.

ಹೋರಾಟ ಸಮಿತಿಯ ಅಧ್ಯಕ್ಷ, ಮಾಜಿ ಸಚಿವ ಬಿ.ರಮಾನಾಥ ರೈ ಪ್ರತಿಭಟನಕಾರರನ್ನು ಉದ್ದೇಶಿಸಿ ಮಾತನಾಡಿ ದ.ಕ. ಜಿಲ್ಲೆಯ ರೈತರು ಸಣ್ಣ ಹಿಡುವಳಿದಾರರು. ಅಡಿಕೆ, ತೆಂಗು, ಬಾಳೆ ಹೀಗೆ ಲಾಭದಾಯಕ ಕೃಷಿ ಮಾಡುತ್ತಾರೆ. ಅಂತಹ ಕೃಷಿ ಭೂಮಿಯಲ್ಲಿ ವಿದ್ಯುತ್ ಮಾರ್ಗ ಹಾದು ಹೋದರೆ ಜನರ ಬದುಕೇ ನಾಶವಾದಂತೆ ಎಂದರು. ಈ ಯೋಜನೆಯಿಂದ ಮನುಷ್ಯರು ಮಾತ್ರವಲ್ಲದೆ ಸಕಲ ಜೀವ ರಾಶಿಗಳಿಗೂ ತೊಂದರೆಯಾಗುತ್ತದೆ. ಆದ್ದರಿಂದ ನಾವು ವೈಜ್ಞಾನಿಕವಾಗಿ ಚಿಂತಿಸ ಬೇಕಾಗಿದೆ. ನಮ್ಮ ಹೋರಾಟ ಒಂದು ದಿನಕ್ಕೆ ಸೀಮಿತವಾಗದೆ, ನಿರಂತರ ಹೋರಾಟ ನಡೆಯಬೇಕಾಗಿದೆ ಎಂದು ಅವರು.

ರೈತರಿಗೆ ಪರಿಹಾರ ಮುಖ್ಯವಲ್ಲ, ಪರ್ಯಾಯ ವ್ಯವಸ್ಥೆ ಬೇಕಾಗಿದೆ. ಇಂದನ ಸಚಿವರು ನಮ್ಮ ಜಿಲ್ಲೆಯವರೇ ಆಗಿರುವುದರಿಂದ ಈ ಯೋಜನೆಯನ್ನು ಒಂದೇ ದಿನದಲ್ಲಿ ರದ್ದುಗೊಳಿಸಲು ಸಾಧ್ಯವಿದೆ ಎಂದು ತಿಳಿಸಿದರು.

ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕಿರಣ್ ಪುಣಚ ಮಾತನಾಡಿ ನಾವು ಅಭಿವೃದ್ಧಿಯ ವಿರೋಧಿಗಳಲ್ಲ, ಆದರೆ ರೈತರಿಗೆ ಅನ್ಯಾಯವಾದರೆ ಸಹಿಸುವವರು ಅಲ್ಲ ಎಂದರು. ವಿದ್ಯುತ್ ಮಾರ್ಗ ಅಳವಡಿಸಲು ಗೂಗಲ್‌ನಲ್ಲಿ ಸರ್ವೆ ಮಾಡುವವರಿಗೆ ಪರಿಸರ, ಕೃಷಿ, ಜೀವ ವೈವಿಧ್ಯ, ಅರಣ್ಯಕ್ಕೆ ತೊಂದರೆ ಆಗದಂತೆ ಯೋಜನೆ ರೂಪಿಸಲು ಗೂಗಲ್‌ನಲ್ಲಿ ಸಾಧ್ಯವಾಗಿಲ್ಲವೇ ಎಂದು ಪ್ರಶ್ನಿಸಿದ ಅವರು ನಮಗೆ ಬದುಕು ಮುಖ್ಯ, ಬದುಕಿಗಾಗಿ ಹೋರಾಟ ಅನಿವಾರ್ಯ ಎಂದು ತಿಳಿಸಿದರು.

ಸಂತ್ರಸ್ತೆ ಕಾನ್ಸೆಪ್ಟ ಡೇಸಾ ಹಾಗೂ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಮಾಜಿ ಸದಸ್ಯ ಪಿಯೂಸ್ ಎಲ್ ರೊಡ್ರಿಗಸ್ ಮಾತನಾಡಿದರು. ಪ್ರಮುಖರಾದ ಬೇಬಿ ಕುಂದರ್, ಸುದೀಪ್ ಕುಮಾರ್ ಶೆಟ್ಟಿ, ಚಂದ್ರಪ್ರಕಾಶ್ ಶೆಟ್ಟಿ ಎಂ.ಎಸ್. ಮಹಮ್ಮದ್, ಪದ್ಮಶೇಖರ್ ಜೈನ್, ಸುದರ್ಶನ್ ಜೈನ್, ವೀಣಾಭಟ್, ರಾಯ್ ಕಾರ್ಲೋ, ಮಹಮದ್ ಶಫಿ, ಲುಕ್‌ಮಾನ್, ಚಿತ್ತರಂಜನ್ ಶೆಟ್ಟಿ, ರೋಷನ್ ರೈ, ಮೋಹನ್ ಗೌಡ ಕಲ್ಮಂಜ, ಶೇಖರ್ ಬಿ, ರಾಮಣ್ಣ ವಿಟ್ಲ, ಪ್ರಭಾಕರ ದೈವಗುಡ್ಡೆ ಪರಮೇಶ್ವರ ಮೂಲ್ಯ, ವಾಸು ಪೂಜಾರಿ, ಲವಿನಾ ವಿಲ್ಮಾ ಮೋರಸ್, ಪದ್ಮನಾಭ ರೈ, ಪ್ರಕಾಶ್ ಶೆಟ್ಟಿ, ಜಗದೀಶ್ ಕೊಯಿಲಾ, ಪ್ರಶಾಂತ್ ಕುಲಾಲ್, ಸುರೇಶ್ ಜೋರಾ, ಯೂಸುಫ್ ಕರಂದಾಡಿ, ಆನಂದ ಸಾಲ್ಯಾನ್, ಅಬ್ಬಾಸ್ ಅಲಿ, ಜನಾರ್ದನ ಚೆಂಡ್ತಿಮಾರ್, ರಮೇಶ್ ನಾಯಕ್, ವೆಂಕಪ್ಪ ಪೂಜಾರಿ, ಪ್ರೇಮನಾಥ ಶೆಟ್ಟಿ, ಹಸೈನಾರ್, ಮಧುಸೂದನ್ ಶೆಣೈ, ಐಡಾ ಸುರೇಶ್, ಪ್ಲೋಸಿ ಡಿಸೋಜಾ, ಬೆನೆಡಿಕ್ಟ್ ಕಾರ್ಲೋ, ಸೀತಾರಾಮ ಶೆಟ್ಟಿ, ನವಾಝ್ ಬಂಟ್ವಾಳ, ಇಬ್ರಾಹಿಂ ನಾವಾಝ್, ಶರೀಫ್ ಪರ್ಲ್ಯ, ಲೋಕೇಶ್ ಸುವರ್ಣ ಮೊದಲಾದವರು ಉಪಸ್ಥಿತರಿದ್ದರು.

ಸುರೇಶ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮಕ್ಕಿಂತ ಪೂರ್ವಭಾವಿಯಾಗಿ ಬೈಕ್ ರ್‍ಯಾಲಿ ನಡೆಯಿತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
153
Mounesh V

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು