ಮಂಗಳೂರು : ಉದ್ಯಮಿಯೊಬ್ಬರಿಗೆ ಭೂಗತ ಪಾತಕಿ ಕಲಿ ಯೋಗೀಶ ಜೀವ ಬೆದರಿಕೆ ಹಾಕಿದ್ದು, ಈ ಸಂಬಂಧ ಮೂಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೂಲ್ಕಿ ಉದ್ಯಮಿ ನಾಗರಾಜ್ ಎಂಬುವರಿಗೆ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಭೂಗತ ಪಾತಕಿ ಕಲಿ ಯೋಗೀಶ ಇಂಟರ್ನೆಟ್ ಕಾಲ್ ಮೂಲಕ ಹಣ ನೀಡುವಂತೆ ಜೀವಬೆದರಿಕೆ ಹಾಕಿದ್ದಾನೆ.
2017 ರಲ್ಲಿ ಇದೇ ರೀತಿ ಬೆದರಿಕೆ ಉದ್ಯಮಿ ಹಾಗೂ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಅನಿಲ್ ದಾಸ್ ಗೆ ಭೂಗತ ಪಾತಕಿ ಕಲಿ ಯೋಗಿಶ್ ಹೆಸರಿನಲ್ಲಿ ಬೆದರಿಕೆ ಕರೆ ಬಂದಿರುವ ಬಗ್ಗೆ ಕದ್ರಿ ಪೊಲೀಸರಿಗೆ 2017ರಲ್ಲಿ ದೂರು ಬಂದಿತ್ತು .ಕಲಿ ಯೋಗೀಶ್ ಹೆಸರಿನಲ್ಲಿ ಕೆಲವು ದಿನಗಳಿಂದ ಬೆದರಿಕೆ ಕರೆ ಬರುತ್ತಿದ್ದು ಅವರು ನಿರ್ಲಕ್ಷ್ಯ ಮಾಡಿದರೂ ಮತ್ತೆ ಕರೆ ಬಂದಿದ್ದು ತಕ್ಷಣ ಐವತ್ತು ಲಕ್ಷ ರೂ ನೀಡಬೇಕು ಈ ಪರಿಹಾರ ನೀಡದಿದ್ದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿರುವುದಾಗಿ ಅನಿಲ್ ದಾಸ್ ಪೊಲೀಸರಿಗೆ ದೂರು ನೀಡಿದ್ದರು.
ಪಾತಕಿ ಕಲಿಯೋಗಿಶ್ ಈಗ ಎಲ್ಲಿದ್ದಾನೆ ಎಂಬುದು ಸ್ಪಷ್ಟವಾಗಿ ಪೋಲಿಸರಿಗೂ ಗೊತ್ತಾಗುತ್ತಿಲ್ಲ. ಆದರೆ ಆತ ಬ್ಯಾಂಕಾಕ್ ಅಥವಾ ಮೊರಾಕೊದಲ್ಲಿ ಇದ್ದಾನೆ ಎಂದು ಹೇಳಲಾಗುತ್ತಿದೆ. ಇನ್ನು ಕೆಲವು ಮಂದಿ ಭೂಗತ ಪಾತಕಿಗಳ ಮೇಲೆ ಮಂಗಳೂರು ಪೊಲೀಸರು ಜಾರಿ ಮಾಡಿರುವ ರೆಡ್ ಕಾರ್ನರ್ ನೋಟಿಸ್ ಈಗಲೂ ಚಾಲ್ತಿಯಲ್ಲಿದೆ.