ಪುತ್ತೂರು : ನಾವು ಬೇರೆಯವರಿಗೆ ಉಪಕಾರ ಸಹಾಯಗಳನ್ನು ಮಾಡದಿದ್ದರೂ ಅಡ್ಡಿಯಿಲ್ಲ. ಆದರೆ ತೊಂದರೆ ಮಾಡಬಾರದು ಎಂಬ ನೀತಿಯನ್ನು ನಾವೆಲ್ಲರೂ ಪಾಲಿಸಬೇಕು ಮಾತ್ರವಲ್ಲದೆ ನಮ್ಮ ಮಕ್ಕಳಿಗೆ ತಿಳಿಸಿಕೊಡಬೇಕು. ಅದೇ ನಾವು ಈ ದೇಶಕ್ಕೆ ಕೊಡಬಹುದಾದ ಬಹುದೊಡ್ಡ ಕೊಡುಗೆ. ದೇಶದ ಧ್ವಜದಡಿ ಎಲ್ಲರೂ ಒಂದಾಗಿ ಸೇರುವುದು ಬಹುದೊಡ್ಡ ಹೆಮ್ಮೆಯ ವಿಷಯ ಎಂದು ಭಾರತೀಯ ಸೇನೆಯ ನಿವೃತ್ತ ಅಧಿಕಾರಿ ಸುಬೇದಾರ್ ಮೇಜರ್ ರಮೇಶ್ ಬಾಬು ಹೇಳಿದರು.
ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ನ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಶ್ರಯದಲ್ಲಿ ಬಪ್ಪಳಿಗೆ ಕ್ಯಾಂಪಸ್ನಲ್ಲಿ ಆಯೋಜಿಸಲಾದ 75ನೇ ಸ್ವಾತಂತ್ರತ್ಯೋತ್ಸವದOದು ಧ್ವಜಾರೋಹಣ ಮಾಡಿ ಮಾತನಾಡಿದರು.
ದೇಶ 75ನೇಯ ಸ್ವಾತಂತ್ರತ್ಯೋತ್ಸವವನ್ನು ಆಚರಿಸುತ್ತಿರುವಾಗ , ಇಡೀ ವಿಶ್ವಕ್ಕೆ ಕೋವಿಡ್ ಲಸಿಕೆ ತಯಾರಿಸಿ ಕೊಟ್ಟಿದೆ. ಅಷ್ಟೇ ಅಲ್ಲದೇ ಒಲಂಪಿಕ್ಸ್ ನಲ್ಲಿ ಪದಕಗಳನ್ನು ಗೆದ್ದಿರುವುದು ಕಂಡಾಗ ಪ್ರಧಾನಿಯವರ ಆತ್ಮ ನಿರ್ಭರ ಕನಸು ಸಾಕಾರಗೊಳ್ಳುತ್ತದೆ ಎಂಬುದರಲ್ಲಿ ಯಾವುದೇ ಸಂಶಯವಿಲ್ಲ ಎಂಬುದು ಸ್ಪಷ್ಟವಾಗುತ್ತಿದೆ ಎಂದು ಅಂಬಿಕಾ ಪದವಿ ಕಾಲೇಜಿನ ಪ್ರಾಚಾರ್ಯ ಡಾ.ವಿನಾಯಕ ಭಟ್ಟ ಗಾಳಿಮನೆ ಹೇಳಿದರು.
ಸ್ವಾತಂತ್ರತ್ಯೋತ್ಸವದ ಪ್ರಯುಕ್ತ ಅಂಬಿಕಾ ಸಂಸ್ಥೆಗಳ ವಿದ್ಯಾರ್ಥಿಗಳಿಗೆ ಆಯೋಜಿಸಲಾದ ಸ್ಪರ್ಧೆಗಳಲ್ಲಿ ವಿಜೇತರಾದವರನ್ನು ಉಪನ್ಯಾಸಕ ತಿಲೋಶ್ ಘೋಷಿಸಿದರು. ಉಪನ್ಯಾಸಕಿಯರು ವಂದೇಮಾತರA ಗೀತೆಯನ್ನು ಪ್ರಸ್ತುತಪಡಿಸಿದರು.
ಈ ಸಂದರ್ಭದಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ, ಕೋಶಾಧಿಕಾರಿ ರಾಜಶ್ರೀ ಎಸ್ ನಟ್ಟೋಜ, ಆಡಳಿತಾಧಿಕಾರಿ ಗಣೇಶ್ ಪ್ರಸಾದ್ ಎ, ಬಪ್ಪಳಿಗೆಯ ಅಂಬಿಕಾ ಪದವಿಪೂರ್ವ ವಿದ್ಯಾಲಯದ ಪ್ರಾಂಶುಪಾಲ ಶಂಕರನಾರಾಯಣ ಭಟ್, ನೆಲ್ಲಿಕಟ್ಟೆಯ ಅಂಬಿಕಾ ಪದವಿಪೂರ್ವ ವಿದ್ಯಾಲಯದ ಪ್ರಾಂಶುಪಾಲ ಸತ್ಯಜಿತ್ ಉಪಾಧ್ಯಾಯ ಎಂ, ಅಂಬಿಕಾ ಸಿಬಿಎಸ್ಇ ವಿದ್ಯಾಲಯದ ಪ್ರಾಚಾರ್ಯೆ ಮಾಲತಿ ಡಿ, ಬೋಧಕ ಮತ್ತು ಬೋಧಕೇತರ ವೃಂದ, .ಉಪನ್ಯಾಸಕಿಯರು ವಂದೇಮಾತರO ಗೀತೆಯನ್ನು ಪ್ರಸ್ತುತಪಡಿಸಿದರು. ಉಪನ್ಯಾಸಕ ಸಮ್ರತ್ ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು. ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಸಾರ್ವಜನಿಕ ಸಂಪರ್ಕಾಧಿಕಾರಿ ರಾಕೇಶ್ ಕುಮಾರ್ ಕಮ್ಮಜೆ ವಂದಿಸಿದರು.
ಕಿಡ್ನಾಪ್ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲುಪಾಲಾಗಿರುವ ಮಾಜಿ ಸಚಿವ ಎಚ್.ಡಿ ರೇವಣ್ಣ ಅವರು ಇಂದು ಮತ್ತೆ ಜಾಮೀನು ಅರ್ಜಿ ವಿಚಾರಣೆ…
ಚುನಾವಣೆಗೂ ಮುನ್ನ ದಿನವೇ ಜಾರ್ಖಂಡ್ನ ಪಲಮುವಿನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೂವರು ಅಪ್ರಾಪ್ತರು ಸೇರಿದಂತೆ ಕನಿಷ್ಠ ನಾಲ್ವರು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು…
ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಎಲ್ಒಸಿ ಬಳಿ ಶನಿವಾರ ತಡರಾತ್ರಿ ಶಂಕಿತ ಪಾಕಿಸ್ತಾನಿ ಡ್ರೋನ್ ಮೇಲೆ ಭಾರತೀಯ ಸೇನಾ…
ಇಂದು ರಾಜ್ಯದ 15 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ ಇದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.ದಕ್ಷಿಣ ಕನ್ನಡ, ಉಡುಪಿ,…
ಸೂಪರ್ಬಿಟ್ ರ್ಯಾಪಿಡ್ ಮತ್ತು ಬ್ಲಿಟ್ಜ್ ಚೆಸ್ ಟೂರ್ನಿಯಲ್ಲಿ ವಿಶ್ವದ ಅಗ್ರಮಾನ್ಯ ಆಟಗಾರ ನಾರ್ವೆಯ ಮ್ಯಾಗ್ನಸ್ ಕಾರ್ಲ್ಸನ್ ವಿರುದ್ಧ ಭಾರತದ ಗ್ರ್ಯಾಂಡ್…
ಕನ್ನಡ ಸಿನಿಮಾ ಹಾಗೂ ಕಿರುತೆರೆಯ ಯುವ ನಟ ಚೇತನ್ ಚಂದ್ರ ಮೇಲೆ ಬೆಂಗಳೂರಿನಲ್ಲಿ ಹಲ್ಲೆ ನಡೆದಿದೆ. ಕನಕಪುರ ರಸ್ತೆಯ ಕಗ್ಗಲಿಪುರದಲ್ಲಿ…