ಮಂಗಳೂರು : ಇತ್ತೀಚೆಗೆ ಉಪ್ಪಿನಂಗಡಿಯಲ್ಲಿ ನಡೆದ ತಲವಾರು ದಾಳಿ ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆಗಾಗಿ ಉಪ್ಪಿನಂಗಡಿ ಪೊಲೀಸರು ವಶಪಡಿಸಿಕೊಂಡಿದ್ದ ಪಿಎಫ್ ಐ ಮುಖಂಡರನ್ನು ಬಿಡುಗಡೆಗೊಳಿಸಬೇಕೆಂದು ಆಗ್ರಹಿಸಿ ಮಂಗಳವಾರ ನಡೆದ ಪ್ರತಿಭಟನೆಯ ಸಂದರ್ಭ ನಡೆದ ಸಾರ್ವಜನಿಕ ಶಾಂತಿ ಭಂಗ.
ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಕೋವಿಡ್ ನಿಯಮಾವಳಿ ಉಲ್ಲಂಘನೆ ಕೊಲೆ ಯತ್ನ ಮತ್ತಿತರ ಪ್ರಕರಣಕ್ಕೆ ಸಂಬಂಧಿಸಿ 3ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿದ್ದು ಅದರಲ್ಲಿ 1ಪ್ರಕರಣಕ್ಕೆ ಸಂಬಂಧಿಸಿ ಹತ್ತು ಮಂದಿ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವುದಾಗಿ ಪೊಲೀಸರು ತಿಳಿಸಿದ್ದಾರೆ.
ಘಟನೆಗೆ ಸಂಬಂಧಿಸಿ ಉಪ್ಪಿನಂಗಡಿ ಪೊಲೀಸ್ ಠಾಣಾ ಉಪನಿರೀಕ್ಷಕರಾದ ಓಮನಾ ದೂರು ನೀಡಿದ್ದು ಪಿಎಫ್ಐ ಸಂಘಟನೆಯ ಮುಖಂಡರಾದ ಜಕಾರಿಯಾ ಮುಸ್ತಫಾ ಅವರನ್ನ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿ ಆರೋಪಿತರು ಏಕಾಏಕಿಯಾಗಿ ಯಾವುದೇ ಅನುಮತಿ ಪಡೆಯದೆ ಅಕ್ರಮ ಕೂಟ ಸೇರಿ ಕೊಂಡು ಪೊಲೀಸ್ ಠಾಣೆ ಮುಂಭಾಗ ಸಾರ್ವಜನಿಕರ ಸ್ಥಳದಲ್ಲಿ ಗುಂಪು ಕಟ್ಟಿಕೊಂಡು ಸಾರ್ವಜನಿಕರ ವಾಹನಗಳ ಸಂಚಾರಕ್ಕೆ ಅಡ್ಡಿಯುಂಟು ಮಾಡುತ್ತ ಸಂಜೆ 6ಗಂಟೆ ಸುಮಾರಿಗೆ ಆರೋಪಿಗಳು ಠಾಣೆಗೆ ಪ್ರವೇಶಿಸಲು ಪ್ರಯತ್ನಿಸಿದ್ದು ಈ ಸಂದರ್ಭ ಬಂದೋಬಸ್ತ್ ಕರ್ತವ್ಯದಲ್ಲಿದ್ದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ತಳ್ಳಿ ಅವರ ಕರ್ತವ್ಯಕ್ಕೆ ಅಡ್ಡಿಯುಂಟು ಮಾಡಿದ್ದಲ್ಲದೆ ಯಾವುದೇ ಮಾಸ್ಕ್ ಧರಿಸದೇ ರಾಜ್ಯ ಸರಕಾರ ಹೊರಡಿಸಿದ ಕೋರ್ಟ್ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.